Home / ಕವನ / ಕವಿತೆ / ಲಾಂಛನ

ಲಾಂಛನ

ಮುಂಜಾನೆ ಸೂರ್ಯನ ಕಿರಣಗಳು ಸೋಕಿ
ತೆರೆದ ಕಣ್ಣುಗಳ ತುಂಬ ಕಾಲಾತೀತ ಕವಿತೆಗಳು.
ಗುಂಪಿನಲಿ ತೇಲಿಹೋದ ಅವರಿವರ ಹೆಜ್ಜೆಗಳು
ಕಾಲುದಾರಿ ನಿರ್ಮಿಸಿ ಸುಖದ ಸಂತೋಷದ
ಗಳಿಗೆಗಳು.

ನಂಬಿಕೆಗಳು ಊರತುಂಬ ಹರಡಿದ ಗಾಳಿ.
ಯಾರದೋ ಪಾಪ ಪ್ರಾಯಶ್ಚಿತ ತೊಳೆದು, ಸರಿದು
ಹೋಗಿದೆ. ಹೆಪ್ಪುಗಟ್ಟಿದ ಕಾಲವನ್ನು ಹುರಿಗೊಳಿಸುವ
ನಡೆದು ಹೋಗುವನ ಬೆರಳಿಗೆ ತಾಗಿದ ನೆಲದ ನಿಧಾನ.

ಮನಸ್ಸಿನ ದೇವರು ಪ್ರಜ್ಞೆಯ ಇಂದ್ರೀಯ ಸುಖ,
ಅವರು ಬಿಟ್ಟು ಇವರ್ಯಾರು ವೈರುದ್ಯಗಳ ಮಧ್ಯೆ.
ದಹಿಸುವ ವಿಶ್ವ ಚೇತನ ಕಾವ್ಯದ ಧಾರೆ,
ಸಾವನ್ನು ಹೆಲ್ಲುವ ಹವಣಿಕೆಯ ಹಣತೆಯ ಬೆಳಕು.

ಕನ್ನಡಿಯಲಿ ಕಂಡ ಮುಖ ಸಮೂಹದಲಿ ತೇಲಿ
ಬೀದಿ ಬೀದಿಯಲ್ಲಿ ರಂಪರಾಟಗಳು ಅರಳಿ
ಕಂಡ ಮನಸ್ಸುಗಳ ಕಿಡಿಗೇಡಿತನ ತಿರುವುಗಳು,
ಒಳಗೊಳಗೆ ಇಳಿದ ಬೆಲ್ಲದ ಗಟ್ಟಿಪಾಕ ಸತ್ಯಗಳು.

`ನಾಜೂಕಿನ ಕ್ಷಣಗಳು ಬಯಲಲಿ ಕರಗಿ ಮತ್ತೆ
ಬಿಳಿ ಮೋಡಗಳು ನೀಲಿ ಆಕಾಶದಲಿ ತೇಲಿ ಮತ್ತೆ
ಬೆಳಕಿನ ಕತ್ತಲಿನ ಪಲ್ಲಟಗಳು, ಸುರಿ ಮಳೆಯಲಿ
ಅವ್ವ ಹಚ್ಚಿಟ್ಟ ಕಂದೀಲು ವರ್ಣದ ಹೊಂಗಿರಣ ಸೂಸಿತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...