Home / ಕವನ / ಕವಿತೆ / ಅಲ್ಲಮನೆಂದರೆ

ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ
ವೇದ್ಯ, ಪಾಪ ಪುಣ್ಯ ಸುಖ ದುಃಖ
ಎಲ್ಲವ ದಾಟಿ ಮರಣವನು ಜನನವಾಗಿಸಿ,
ಕಾಲ ಸರಿದ ಮಹಿಮೆ ಅವನ ನಿಜ ಒಲವು.

ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ
ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ.
ಶರಣನಿಗೆ ಭಯವಿಲ್ಲ ಬಂಧನವಿಲ್ಲ. ಮತ್ತೆ
ಪುರುಷಕ್ಕೆ ಬೆಲೆ ಬಂದಿತು ಅಂಗದ ಲಿಂಗದಿಂದ.

ಹಗಲಲಿ ಇರುಳಲಿ ಅಲ್ಲಿಂದ ಇಲ್ಲಿಂದ ಒಡಲ
ಕಾವಿಗೆ ತಳಮಳಿಸಿದ ಜೀವ ನೆತ್ತಿಯ ಒಳಗಿನ,
ಮೃತ್ಯು ನೆರಳು ಕಾಣದೇ ಸುಳ್ಳು ಬೆಳದಿಂಗಳ,
ಬಯಲ ನೋಡಿ, ಹಿಂದಣ ಹೆಜ್ಜೆಗಳು ನೆಲಗೊಳ್ಳದು.

ದಾರಿಗುಂಟ ನಡೆದವರಿಲ್ಲ ಎಲ್ಲ ಲೆಕ್ಕಾಚಾರಗಳ
ಬದಲಿಸಿ ಜಾರಿ ಬಿದ್ದವರು, ನೆಲವ ಬಿಟ್ಟು
ಆಕಾಶದಲಿ ನಿಂತು, ಮುಗಿಲೊಳು ಮಿಂಚದೇ,
ಸಾಮಾನ್ಯದ ಅರಿವಿನ ಘಮ ಕಳೆದು ಹೋಗುವುದು.

ಕಂಗಳ ಮುಂದಿನ ಕತ್ತಲೆ, ಮನದ ಮುಂದೆ
ಬಟ್ಟೆ, ಹೊರಗಡೆಯ ಶೃಂಗಾರ ಮರೆತು
ಒಳಗೆ ನೋಡಿದವರ ಬೆಳಕಿನ ಸೂರ್ಯನ ಕಿರಣಗಳು,
ಅಂಬರದೊಳಗೆ ಒಂದು ಹಸಿರು ಬಯಲು ಹುಟ್ಟುವುದು.
ಅಲ್ಲಮನೆಂದರೆ ಘನ ರೂಪದ ಚಿತ್ರ ಬರೆಯಬಹುದು.
ಆದರೆ ಪ್ರಾಣವ ಹಿಡಿಯಲು ಬಾರದು.

ಅಲ್ಲಮನೆಂದರೆ ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲದ ಬಯಲು.
ಅಂತಃ ಶೂನ್ಯಂ, ಬಹಿಃ ಶೂನ್ಯಂ ಶೂನ್ಯಂ ಸರ್ವ ಶೂನ್ಯಂ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...