ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ
ವೇದ್ಯ, ಪಾಪ ಪುಣ್ಯ ಸುಖ ದುಃಖ
ಎಲ್ಲವ ದಾಟಿ ಮರಣವನು ಜನನವಾಗಿಸಿ,
ಕಾಲ ಸರಿದ ಮಹಿಮೆ ಅವನ ನಿಜ ಒಲವು.

ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ
ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ.
ಶರಣನಿಗೆ ಭಯವಿಲ್ಲ ಬಂಧನವಿಲ್ಲ. ಮತ್ತೆ
ಪುರುಷಕ್ಕೆ ಬೆಲೆ ಬಂದಿತು ಅಂಗದ ಲಿಂಗದಿಂದ.

ಹಗಲಲಿ ಇರುಳಲಿ ಅಲ್ಲಿಂದ ಇಲ್ಲಿಂದ ಒಡಲ
ಕಾವಿಗೆ ತಳಮಳಿಸಿದ ಜೀವ ನೆತ್ತಿಯ ಒಳಗಿನ,
ಮೃತ್ಯು ನೆರಳು ಕಾಣದೇ ಸುಳ್ಳು ಬೆಳದಿಂಗಳ,
ಬಯಲ ನೋಡಿ, ಹಿಂದಣ ಹೆಜ್ಜೆಗಳು ನೆಲಗೊಳ್ಳದು.

ದಾರಿಗುಂಟ ನಡೆದವರಿಲ್ಲ ಎಲ್ಲ ಲೆಕ್ಕಾಚಾರಗಳ
ಬದಲಿಸಿ ಜಾರಿ ಬಿದ್ದವರು, ನೆಲವ ಬಿಟ್ಟು
ಆಕಾಶದಲಿ ನಿಂತು, ಮುಗಿಲೊಳು ಮಿಂಚದೇ,
ಸಾಮಾನ್ಯದ ಅರಿವಿನ ಘಮ ಕಳೆದು ಹೋಗುವುದು.

ಕಂಗಳ ಮುಂದಿನ ಕತ್ತಲೆ, ಮನದ ಮುಂದೆ
ಬಟ್ಟೆ, ಹೊರಗಡೆಯ ಶೃಂಗಾರ ಮರೆತು
ಒಳಗೆ ನೋಡಿದವರ ಬೆಳಕಿನ ಸೂರ್ಯನ ಕಿರಣಗಳು,
ಅಂಬರದೊಳಗೆ ಒಂದು ಹಸಿರು ಬಯಲು ಹುಟ್ಟುವುದು.
ಅಲ್ಲಮನೆಂದರೆ ಘನ ರೂಪದ ಚಿತ್ರ ಬರೆಯಬಹುದು.
ಆದರೆ ಪ್ರಾಣವ ಹಿಡಿಯಲು ಬಾರದು.

ಅಲ್ಲಮನೆಂದರೆ ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲದ ಬಯಲು.
ಅಂತಃ ಶೂನ್ಯಂ, ಬಹಿಃ ಶೂನ್ಯಂ ಶೂನ್ಯಂ ಸರ್ವ ಶೂನ್ಯಂ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾರತಾಂಬೆಯ ಮಕ್ಕಳು
Next post ಕೊನೆಯಾಶೆ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…