Home / ಕವನ / ಕವಿತೆ / ಅಲ್ಲಮನೆಂದರೆ

ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ
ವೇದ್ಯ, ಪಾಪ ಪುಣ್ಯ ಸುಖ ದುಃಖ
ಎಲ್ಲವ ದಾಟಿ ಮರಣವನು ಜನನವಾಗಿಸಿ,
ಕಾಲ ಸರಿದ ಮಹಿಮೆ ಅವನ ನಿಜ ಒಲವು.

ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ
ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ.
ಶರಣನಿಗೆ ಭಯವಿಲ್ಲ ಬಂಧನವಿಲ್ಲ. ಮತ್ತೆ
ಪುರುಷಕ್ಕೆ ಬೆಲೆ ಬಂದಿತು ಅಂಗದ ಲಿಂಗದಿಂದ.

ಹಗಲಲಿ ಇರುಳಲಿ ಅಲ್ಲಿಂದ ಇಲ್ಲಿಂದ ಒಡಲ
ಕಾವಿಗೆ ತಳಮಳಿಸಿದ ಜೀವ ನೆತ್ತಿಯ ಒಳಗಿನ,
ಮೃತ್ಯು ನೆರಳು ಕಾಣದೇ ಸುಳ್ಳು ಬೆಳದಿಂಗಳ,
ಬಯಲ ನೋಡಿ, ಹಿಂದಣ ಹೆಜ್ಜೆಗಳು ನೆಲಗೊಳ್ಳದು.

ದಾರಿಗುಂಟ ನಡೆದವರಿಲ್ಲ ಎಲ್ಲ ಲೆಕ್ಕಾಚಾರಗಳ
ಬದಲಿಸಿ ಜಾರಿ ಬಿದ್ದವರು, ನೆಲವ ಬಿಟ್ಟು
ಆಕಾಶದಲಿ ನಿಂತು, ಮುಗಿಲೊಳು ಮಿಂಚದೇ,
ಸಾಮಾನ್ಯದ ಅರಿವಿನ ಘಮ ಕಳೆದು ಹೋಗುವುದು.

ಕಂಗಳ ಮುಂದಿನ ಕತ್ತಲೆ, ಮನದ ಮುಂದೆ
ಬಟ್ಟೆ, ಹೊರಗಡೆಯ ಶೃಂಗಾರ ಮರೆತು
ಒಳಗೆ ನೋಡಿದವರ ಬೆಳಕಿನ ಸೂರ್ಯನ ಕಿರಣಗಳು,
ಅಂಬರದೊಳಗೆ ಒಂದು ಹಸಿರು ಬಯಲು ಹುಟ್ಟುವುದು.
ಅಲ್ಲಮನೆಂದರೆ ಘನ ರೂಪದ ಚಿತ್ರ ಬರೆಯಬಹುದು.
ಆದರೆ ಪ್ರಾಣವ ಹಿಡಿಯಲು ಬಾರದು.

ಅಲ್ಲಮನೆಂದರೆ ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲದ ಬಯಲು.
ಅಂತಃ ಶೂನ್ಯಂ, ಬಹಿಃ ಶೂನ್ಯಂ ಶೂನ್ಯಂ ಸರ್ವ ಶೂನ್ಯಂ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...