Home / ಕವನ / ಕವಿತೆ / ಅಲ್ಲಮನೆಂದರೆ

ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ
ವೇದ್ಯ, ಪಾಪ ಪುಣ್ಯ ಸುಖ ದುಃಖ
ಎಲ್ಲವ ದಾಟಿ ಮರಣವನು ಜನನವಾಗಿಸಿ,
ಕಾಲ ಸರಿದ ಮಹಿಮೆ ಅವನ ನಿಜ ಒಲವು.

ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ
ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ.
ಶರಣನಿಗೆ ಭಯವಿಲ್ಲ ಬಂಧನವಿಲ್ಲ. ಮತ್ತೆ
ಪುರುಷಕ್ಕೆ ಬೆಲೆ ಬಂದಿತು ಅಂಗದ ಲಿಂಗದಿಂದ.

ಹಗಲಲಿ ಇರುಳಲಿ ಅಲ್ಲಿಂದ ಇಲ್ಲಿಂದ ಒಡಲ
ಕಾವಿಗೆ ತಳಮಳಿಸಿದ ಜೀವ ನೆತ್ತಿಯ ಒಳಗಿನ,
ಮೃತ್ಯು ನೆರಳು ಕಾಣದೇ ಸುಳ್ಳು ಬೆಳದಿಂಗಳ,
ಬಯಲ ನೋಡಿ, ಹಿಂದಣ ಹೆಜ್ಜೆಗಳು ನೆಲಗೊಳ್ಳದು.

ದಾರಿಗುಂಟ ನಡೆದವರಿಲ್ಲ ಎಲ್ಲ ಲೆಕ್ಕಾಚಾರಗಳ
ಬದಲಿಸಿ ಜಾರಿ ಬಿದ್ದವರು, ನೆಲವ ಬಿಟ್ಟು
ಆಕಾಶದಲಿ ನಿಂತು, ಮುಗಿಲೊಳು ಮಿಂಚದೇ,
ಸಾಮಾನ್ಯದ ಅರಿವಿನ ಘಮ ಕಳೆದು ಹೋಗುವುದು.

ಕಂಗಳ ಮುಂದಿನ ಕತ್ತಲೆ, ಮನದ ಮುಂದೆ
ಬಟ್ಟೆ, ಹೊರಗಡೆಯ ಶೃಂಗಾರ ಮರೆತು
ಒಳಗೆ ನೋಡಿದವರ ಬೆಳಕಿನ ಸೂರ್ಯನ ಕಿರಣಗಳು,
ಅಂಬರದೊಳಗೆ ಒಂದು ಹಸಿರು ಬಯಲು ಹುಟ್ಟುವುದು.
ಅಲ್ಲಮನೆಂದರೆ ಘನ ರೂಪದ ಚಿತ್ರ ಬರೆಯಬಹುದು.
ಆದರೆ ಪ್ರಾಣವ ಹಿಡಿಯಲು ಬಾರದು.

ಅಲ್ಲಮನೆಂದರೆ ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲದ ಬಯಲು.
ಅಂತಃ ಶೂನ್ಯಂ, ಬಹಿಃ ಶೂನ್ಯಂ ಶೂನ್ಯಂ ಸರ್ವ ಶೂನ್ಯಂ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...