Home / ಕವನ / ಕವಿತೆ / ಅಲ್ಲಮನೆಂದರೆ

ಅಲ್ಲಮನೆಂದರೆ

ಮನಸ್ಸಿನಾಳಕೆ ಇಳಿದ ನಿಮ್ಮ ಘನ
ವೇದ್ಯ, ಪಾಪ ಪುಣ್ಯ ಸುಖ ದುಃಖ
ಎಲ್ಲವ ದಾಟಿ ಮರಣವನು ಜನನವಾಗಿಸಿ,
ಕಾಲ ಸರಿದ ಮಹಿಮೆ ಅವನ ನಿಜ ಒಲವು.

ಎಲ್ಲ ವಿಷಯಗಳ ಅರಿದೆನೆಂಬ ಅಹಂ ಭಾವ
ನಿಜದ ನೆರಳ ಸವರಿ ಸುಖಕ್ಕೆ ಆರೋಚಕವಿಲ್ಲ.
ಶರಣನಿಗೆ ಭಯವಿಲ್ಲ ಬಂಧನವಿಲ್ಲ. ಮತ್ತೆ
ಪುರುಷಕ್ಕೆ ಬೆಲೆ ಬಂದಿತು ಅಂಗದ ಲಿಂಗದಿಂದ.

ಹಗಲಲಿ ಇರುಳಲಿ ಅಲ್ಲಿಂದ ಇಲ್ಲಿಂದ ಒಡಲ
ಕಾವಿಗೆ ತಳಮಳಿಸಿದ ಜೀವ ನೆತ್ತಿಯ ಒಳಗಿನ,
ಮೃತ್ಯು ನೆರಳು ಕಾಣದೇ ಸುಳ್ಳು ಬೆಳದಿಂಗಳ,
ಬಯಲ ನೋಡಿ, ಹಿಂದಣ ಹೆಜ್ಜೆಗಳು ನೆಲಗೊಳ್ಳದು.

ದಾರಿಗುಂಟ ನಡೆದವರಿಲ್ಲ ಎಲ್ಲ ಲೆಕ್ಕಾಚಾರಗಳ
ಬದಲಿಸಿ ಜಾರಿ ಬಿದ್ದವರು, ನೆಲವ ಬಿಟ್ಟು
ಆಕಾಶದಲಿ ನಿಂತು, ಮುಗಿಲೊಳು ಮಿಂಚದೇ,
ಸಾಮಾನ್ಯದ ಅರಿವಿನ ಘಮ ಕಳೆದು ಹೋಗುವುದು.

ಕಂಗಳ ಮುಂದಿನ ಕತ್ತಲೆ, ಮನದ ಮುಂದೆ
ಬಟ್ಟೆ, ಹೊರಗಡೆಯ ಶೃಂಗಾರ ಮರೆತು
ಒಳಗೆ ನೋಡಿದವರ ಬೆಳಕಿನ ಸೂರ್ಯನ ಕಿರಣಗಳು,
ಅಂಬರದೊಳಗೆ ಒಂದು ಹಸಿರು ಬಯಲು ಹುಟ್ಟುವುದು.
ಅಲ್ಲಮನೆಂದರೆ ಘನ ರೂಪದ ಚಿತ್ರ ಬರೆಯಬಹುದು.
ಆದರೆ ಪ್ರಾಣವ ಹಿಡಿಯಲು ಬಾರದು.

ಅಲ್ಲಮನೆಂದರೆ ಅಲ್ಲಿ ಇಲ್ಲಿ ಎಲ್ಲಿಯೂ ಇಲ್ಲದ ಬಯಲು.
ಅಂತಃ ಶೂನ್ಯಂ, ಬಹಿಃ ಶೂನ್ಯಂ ಶೂನ್ಯಂ ಸರ್ವ ಶೂನ್ಯಂ.
*****

Tagged:

Leave a Reply

Your email address will not be published. Required fields are marked *

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...

ಮಧ್ಯಾಹ್ನದ ಆರು ತಾಸಿನ ಸಮಯ. ಬಿಸಿಲು ರಣಗುಟ್ಟುತ್ತಿತ್ತು. ಕಲ್ಲವನು ಉರುವಲ ಹೊರೆಯೊಂದನ್ನು ಹೊತ್ತು ತಂದು, ಗುಡಿಸಲಿನ ಮುಂದೆ ಒಗೆದು ಬೇವಿನ ಗಿಡದ ನೆರಳಿನಲ್ಲಿ ಕುಳಿತು ಉಸ್ಸೆಂದು ಉಸುರುಗರೆದಳು. ಗುಡಿಸಲಿನೊಳಗಿಂದ ನಾಲ್ಕಾರು ಚಿಕ್ಕ ಮಕ್ಕಳು ಹೊರಗೆ ಹಾತೊರೆದು ಬಂದು, “ಅವ್...

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...