Home / ಕವನ / ಕವಿತೆ / ದುರಂತ

ದುರಂತ

ಹೂವು ಅರಳಿದ ಮರದ ಕೆಳಗೆ
ಕುಳಿತ ಅವಳು ಕನಸಿನ ಅರಮನೆಯ
ರಾಜಕುಮಾರಿಯಂತೆ ಮಗಳ ತಬ್ಬಿ
ಎದೆಗಪ್ಪಿಕೊಂಡಿದ್ದಾಳೆ. ಆಕಾಶದಲ್ಲಿ ಒಂಟಿ
ಹದ್ದು ಹಾರಾಡುತ್ತಿದೆ ಆ ಮಟಮಟ ಮಧ್ಯಾಹ್ನದಲಿ.

ನೆರಳ ನೆನಪುಗಳಲಿ ತಣ್ಣ ಮಣ್ಣಲಿ
ಸಡಗರದಲ್ಲಿ ಬೆಳಕು ಅರಳುತಿರಲು
ಯಾವುದೋ ನಿಶಾನೆಯ ಕಪ್ಪು ಮೋಡ ತೇಲಿ
ಮೈಯುಬ್ಬಿ ನಾಲ್ಕು ನಿಟ್ಟಿನ ಎಲ್ಲೆ ಕಟ್ಟು ಹರಿದು
ಬಯಕೆಗಳ ಮಂಗನಾಟ ಸಾರಿದೆ ಪಯಣ
ಏಕಾಂತದಲಿ.

ಹೊಲದುದ್ದಕ್ಕೂ ಹರಿದಾಡಿತ್ತು ನೇಗಿಲು ಮೊನೆ
ಬಸಿರೆಲ್ಲ ಬರಿದು ಬಸಿದು ಹೊರಚೆಲ್ಲಿತ್ತು ಜೀವದ ಸೊನೆ,
ಬೆದೆಯ ಕಾವಿಗೆ ಸಿಕ್ಕ ಹೂವಿನ ಒಡಲು ತುಂಬ
ನಾಗಸಂಪಿಗೆಯ ಕಾವು, ಒಂದು ಘಳಿಗೆಯಲಿ
ಅರಿವಿಲ್ಲದೆ ಪರಿವಿಲ್ಲದೇ ಜೀವ ಝಲ್ಲನೆ ಬೆತ್ತಲೆ
ಆ ಹೊತ್ತಿನಲಿ.

ಕೊಬ್ಬೇರಿದ ಮಬ್ಬಿನಲಿ, ಅಂಗಾಂಗದ ಗೂಳಿ ಮರದಲೋಕದ
ಹೊಸದಾದ ಕಂಪು ಮೆದ್ದವನಂತೆ ಕೆಂಗಣ್ಣು ಹಾಲನುಂಡ
ಹಸುಳೆ ಕದಡಿ, ಹೆಣದ ವಾಸನೆ ಕಾಮೀನ್ಮಕ ಆಹಾ ಯೋನಿ
ಚಕಿತಾ ಹದಗೇರಿದ ಪ್ರಾಣ ತೊಡೆಕಣಿವೆಯ ತಗ್ಗಿನಲಿ ನೆತ್ತರು,
ತುಂಬಿ ಇಡೀ ಹೊಲದಲ್ಲಿ ಬಾಲೆಯ ಅಳು.
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ