Home / ಕವನ / ಕವಿತೆ / ದುರಂತ

ದುರಂತ

ಹೂವು ಅರಳಿದ ಮರದ ಕೆಳಗೆ
ಕುಳಿತ ಅವಳು ಕನಸಿನ ಅರಮನೆಯ
ರಾಜಕುಮಾರಿಯಂತೆ ಮಗಳ ತಬ್ಬಿ
ಎದೆಗಪ್ಪಿಕೊಂಡಿದ್ದಾಳೆ. ಆಕಾಶದಲ್ಲಿ ಒಂಟಿ
ಹದ್ದು ಹಾರಾಡುತ್ತಿದೆ ಆ ಮಟಮಟ ಮಧ್ಯಾಹ್ನದಲಿ.

ನೆರಳ ನೆನಪುಗಳಲಿ ತಣ್ಣ ಮಣ್ಣಲಿ
ಸಡಗರದಲ್ಲಿ ಬೆಳಕು ಅರಳುತಿರಲು
ಯಾವುದೋ ನಿಶಾನೆಯ ಕಪ್ಪು ಮೋಡ ತೇಲಿ
ಮೈಯುಬ್ಬಿ ನಾಲ್ಕು ನಿಟ್ಟಿನ ಎಲ್ಲೆ ಕಟ್ಟು ಹರಿದು
ಬಯಕೆಗಳ ಮಂಗನಾಟ ಸಾರಿದೆ ಪಯಣ
ಏಕಾಂತದಲಿ.

ಹೊಲದುದ್ದಕ್ಕೂ ಹರಿದಾಡಿತ್ತು ನೇಗಿಲು ಮೊನೆ
ಬಸಿರೆಲ್ಲ ಬರಿದು ಬಸಿದು ಹೊರಚೆಲ್ಲಿತ್ತು ಜೀವದ ಸೊನೆ,
ಬೆದೆಯ ಕಾವಿಗೆ ಸಿಕ್ಕ ಹೂವಿನ ಒಡಲು ತುಂಬ
ನಾಗಸಂಪಿಗೆಯ ಕಾವು, ಒಂದು ಘಳಿಗೆಯಲಿ
ಅರಿವಿಲ್ಲದೆ ಪರಿವಿಲ್ಲದೇ ಜೀವ ಝಲ್ಲನೆ ಬೆತ್ತಲೆ
ಆ ಹೊತ್ತಿನಲಿ.

ಕೊಬ್ಬೇರಿದ ಮಬ್ಬಿನಲಿ, ಅಂಗಾಂಗದ ಗೂಳಿ ಮರದಲೋಕದ
ಹೊಸದಾದ ಕಂಪು ಮೆದ್ದವನಂತೆ ಕೆಂಗಣ್ಣು ಹಾಲನುಂಡ
ಹಸುಳೆ ಕದಡಿ, ಹೆಣದ ವಾಸನೆ ಕಾಮೀನ್ಮಕ ಆಹಾ ಯೋನಿ
ಚಕಿತಾ ಹದಗೇರಿದ ಪ್ರಾಣ ತೊಡೆಕಣಿವೆಯ ತಗ್ಗಿನಲಿ ನೆತ್ತರು,
ತುಂಬಿ ಇಡೀ ಹೊಲದಲ್ಲಿ ಬಾಲೆಯ ಅಳು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...