Home / ಕವನ / ಕವಿತೆ / ದುರಂತ

ದುರಂತ

ಹೂವು ಅರಳಿದ ಮರದ ಕೆಳಗೆ
ಕುಳಿತ ಅವಳು ಕನಸಿನ ಅರಮನೆಯ
ರಾಜಕುಮಾರಿಯಂತೆ ಮಗಳ ತಬ್ಬಿ
ಎದೆಗಪ್ಪಿಕೊಂಡಿದ್ದಾಳೆ. ಆಕಾಶದಲ್ಲಿ ಒಂಟಿ
ಹದ್ದು ಹಾರಾಡುತ್ತಿದೆ ಆ ಮಟಮಟ ಮಧ್ಯಾಹ್ನದಲಿ.

ನೆರಳ ನೆನಪುಗಳಲಿ ತಣ್ಣ ಮಣ್ಣಲಿ
ಸಡಗರದಲ್ಲಿ ಬೆಳಕು ಅರಳುತಿರಲು
ಯಾವುದೋ ನಿಶಾನೆಯ ಕಪ್ಪು ಮೋಡ ತೇಲಿ
ಮೈಯುಬ್ಬಿ ನಾಲ್ಕು ನಿಟ್ಟಿನ ಎಲ್ಲೆ ಕಟ್ಟು ಹರಿದು
ಬಯಕೆಗಳ ಮಂಗನಾಟ ಸಾರಿದೆ ಪಯಣ
ಏಕಾಂತದಲಿ.

ಹೊಲದುದ್ದಕ್ಕೂ ಹರಿದಾಡಿತ್ತು ನೇಗಿಲು ಮೊನೆ
ಬಸಿರೆಲ್ಲ ಬರಿದು ಬಸಿದು ಹೊರಚೆಲ್ಲಿತ್ತು ಜೀವದ ಸೊನೆ,
ಬೆದೆಯ ಕಾವಿಗೆ ಸಿಕ್ಕ ಹೂವಿನ ಒಡಲು ತುಂಬ
ನಾಗಸಂಪಿಗೆಯ ಕಾವು, ಒಂದು ಘಳಿಗೆಯಲಿ
ಅರಿವಿಲ್ಲದೆ ಪರಿವಿಲ್ಲದೇ ಜೀವ ಝಲ್ಲನೆ ಬೆತ್ತಲೆ
ಆ ಹೊತ್ತಿನಲಿ.

ಕೊಬ್ಬೇರಿದ ಮಬ್ಬಿನಲಿ, ಅಂಗಾಂಗದ ಗೂಳಿ ಮರದಲೋಕದ
ಹೊಸದಾದ ಕಂಪು ಮೆದ್ದವನಂತೆ ಕೆಂಗಣ್ಣು ಹಾಲನುಂಡ
ಹಸುಳೆ ಕದಡಿ, ಹೆಣದ ವಾಸನೆ ಕಾಮೀನ್ಮಕ ಆಹಾ ಯೋನಿ
ಚಕಿತಾ ಹದಗೇರಿದ ಪ್ರಾಣ ತೊಡೆಕಣಿವೆಯ ತಗ್ಗಿನಲಿ ನೆತ್ತರು,
ತುಂಬಿ ಇಡೀ ಹೊಲದಲ್ಲಿ ಬಾಲೆಯ ಅಳು.
*****

Tagged:

Leave a Reply

Your email address will not be published. Required fields are marked *

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...