Home / ಕವನ / ಕವಿತೆ / ಜಾತ್ರೆ

ಜಾತ್ರೆ

ಆ ಜಾತ್ರೆಯ ತುಂಬೆಲ್ಲಾ ಮಣ್ಣ ವಾಸನೆ
ಹರ್ಷ ಗೆಲವು ಅತಿರೇಕಗಳು ತೊಟ್ಟಿಕ್ಕುವ
ನಾಟಕಗಳು ಅಂಕದ ಪರದೆ, ಹೆಜ್ಜೆಗಳ ಮೇಲೆ
ಅವರಿವರ ಪಾದದ ಗುರುತುಗಳು.

ಆಶ್ಚರ್ಯ ಆಸಕ್ತಿಯ ಪರದೆಯ ಕತ್ತಲು
ಬೆಳಕಿನಲಿ ಮಾರಾಟಕ್ಕೆ ಇವೆ ನಿರ್ಗತಿಕನ ಕನಸುಗಳು.
ಗುಂಪಿನ ಮಧ್ಯದ ಒಂದು ಗದ್ದಲಲಿ ಎಲ್ಲ
ದರ್ಶನಗಳು, ತಲೆಮಾರು ದಾಟಿದ ಬೆಳಕ ಕಿರಣಗಳು.

ಕೂಗಾಟ, ಹರ್ಷ, ಜೂಜು, ಬಾಜಿ ಎಲ್ಲರೂ ಖುಷಿ
ಮನರಂಜನೆಯ ಲೋಕಪ್ರಿಯ, ತಮ್ಮ ಪಾಲಿಗೆ
ದಕ್ಕಿದ ಕ್ಷಣಗಳ ಉಸಿರಾಡುತ್ತಿದ್ದಾರೆ. ಮತ್ತೆ ಡೊಂಬರಾಟ
ನಡೆದಿದೆ. ಸೂರ್ಯ ಎದ್ದ ಧೂಳಿಗೆ ಮಂಕಾಗಿದ್ದಾನೆ.

ರಾಶಿ ಹಾಕಿದ ಗುಂಪಿನಲಿ ಮಗುವಿನ ಗೊಂಬೆ,
ಅಳುತ್ತಿದೆ ಹಾಲಿಗಾಗಿ, ಎಲ್ಲರೂ ವ್ಯಾಪಾರದ ಭರಾಟೆಯಲಿ,
ಕಷ್ಟದ ನಷ್ಟ ತುಂಬವ ಲೆಕ್ಕಾಚಾರದಲಿ ತೊಡಗಿದ್ದಾರೆ.
ಅವಳು ನೋಡುತ್ತಿದ್ದಾಳೆ ಗಾಳಿ ಬೀಸಿದತ್ತ ಚದುರುವ ಜನಗಳ,

ಒಂದು ಊಟ, ಒಂದು ಆಟದ ಸಾಮಾನು ಮಗಳಿಗೆ
ಕೊಡಿಸಬಹುದಾಗಿತ್ತು, ಆದರೆ ಆತುರದ ಜೀವ
ಹಸಿದ ಪ್ರಾಣಿಯಂತೆ, ಅವಳ ಹಿಂಬಾಲಿಸಿ ಸನ್ನೆ ಮಾಡುತ್ತಿತ್ತು.
ಕಣ್ಣೀರಿನಿಂದ ಸುಟ್ಟ ಅವಳ ಕಣ್ಣುಗಳಲಿ ಬಹಳಷ್ಟು ವರ್ಷಗಳ ದುಃಖ.
ಜಾತ್ರೆ ಜನಜಂಗುಳಿಯ ಮಧ್ಯೆ ಸಂತಳ ನೆರಳು ಹರಡಿತ್ತು.
*****

Tagged:

Leave a Reply

Your email address will not be published. Required fields are marked *

ಬೀರ ಹಾಸಿಗೆಯಲ್ಲಿ ಹೊರಳುತ್ತಿದ್ದಾನೆ, ಕಣ್ಣಿಗೆ ನಿದ್ರೆಯಿಲ್ಲ; ಮನಸ್ಸಿಗೆ ಶಾ೦ತಿಯಿಲ್ಲ. ಸಾಯಂಕಾಲ ಊರ ಚಾವಡಿಯಲ್ಲಿ “ಹೆಚ್ಚು ಆಹಾರ ಧಾನ್ಯ ಬೆಳೆಯಿರಿ!” ಎಂಬ ವಿಷಯದ ಮೇಲೆ ಅಧಿಕಾರಿಗಳ ವ್ಯಾಖ್ಯಾನ ಕೇಳಿದ್ದನಾತ. ಆಗಿನಿಂದಲೂ ಅವನಿಗೆ ತಾನೊಂದು ಬಾವಿಯನ್ನೇಕೆ ತೋಡಬಾರದು ಎನ್ನ...

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...