ಮನೆ

ಭಾವ ಚಿತ್ರಗಳನ್ನು ಹೊತ್ತ ಗೋಡೆ
ಮೌನದಲ್ಲೂ ಇತಿಹಾಸ ಬಿಂಬಿಸುತ್ತದೆ.
ಗೋಡೆಗಳು ಕಿಟಕಿಗಳು, ಬಾಗಿಲುಗಳು
ತಮ್ಮೊಳಗೆ ಮನೆಯ ಮನಸ್ಸಿನ ಕಂಪನಗಳ
ಬಗ್ಗೆ ಮಾತನಾಡಿಕೊಳ್ಳುತ್ತವೆ. ಮತ್ತೆ ಇರುವೆಗಳು
ಎಲ್ಲಾ ಜಾಗಗಳನ್ನು ಮೂಸಿಸುತ್ತವೆ ಹಿತವಾಗಿ.

ಬಚ್ಚಲ ಮನೆಯಲ್ಲಿ ತೊಟ್ಟಿಕ್ಕುವ ನಲ್ಲಿಯ ಹನಿ
ಒಳಗಿನ ಎಲ್ಲಾ ಬಿಕ್ಕುಗಳ ಪ್ರತಿಬಿಂಬಿಸಿ, ಎಲ್ಲಾ
ಗೊಂದಲು ಗೋಜಲುಗಳ ಗಡಿಯಾರ ಮಾತ್ರ
ನಿರ್ದಿಷ್ಟ ಜಾಗದಲ್ಲಿ ಒಂದಾಗತ್ತದೆ.
ತೆರೆದ ಮುಚ್ಚಿದ ಬಾಗಿಲುಗಳಿಂದ ಗಾಳಿ ಬೆಳಕು
ಏನನ್ನಾದರೂ ಕಸಿಕಿದು ತಂದು ಗುಡ್ಡೆ ಹಾಕುತ್ತದೆ.

ಗಿಡದಲ್ಲಿ ಹಾರಾಡುವ ದುಂಬಿ ಒಮ್ಮೊಮ್ಮೆ
ಒಳತೋಟಿಯೊಳಗೆ ಇಳಿದಾಗ ಹೂ ಕಂಪನ,
ಧೀರ್ಘ ಮನಸ್ಸಿನ ಕಂಪ, ಗಾಢ ಶಾಂತಿಯನು ಕಲುಕಿ,
ಒಳ ಹೊರಗೆ ಭಂಗಗೊಳಿಸಿ ಮನೆಯ ಮೌನ
ಬಹಳ ಧೀರ್ಘ, ಮಾತುಗಳಿಲ್ಲದ, ನೋಡದ
ಮುಖಗಳು ಚಹಾದ ವಾಸನೆಯಲಿ ಕರಗುತ್ತವೆ.

ಎಲ್ಲರೂ ದೂರದೂರ, ಯಾರೂ ಬರದ ಬಯಲು
ದಾರಿ, ಶುಭಾಶಯಗಳಿಲ್ಲದ ಬೆಳಗು, ಹುಡುಕಿ
ಹೋಗದ ಊರು, ಮುಚ್ಚಿದ ಬಾಗಿಲು, ಕೌನೆರಳಿನ
ಸಂಜೆ, ನಿರ್ಜೀವ ಕುರ್ಚಿಗಳು, ಕಡಿದುಕೊಂಡ
ಬಂಧ, ಯಾರೂ ಇಲ್ಲದೇ ಬರೀ ನಾಯಿ ಒಂದೇ,
ಒಡೆಯನಿಲ್ಲದ ದೊಡ್ಡ ಮನೆ ಕಾಯುತ್ತಿದೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...