ಪ್ರಾರ್ಥನೆ

ಈ ನೋವಿನ ಬದುಕಿನಲ್ಲಿ
ಬರೀ ಬುದ್ಧಿಯ ವಿಚಾರಗಳಿಂದ
ಉಪಯೋಗವಿಲ್ಲ ದೇವರೇ ಈ
ಮೂಳೆಯೊಳಗೆ ಇಳಿಯುವ,
ಹಲ್ಲು ಉದುರಿಸುವ ಚಳಿಯಿಂದ ನನಗೆ
ನಿನ್ನ ಬೆಚ್ಚನೆಯ ಭರವಸೆಯ ಕಂಬಳಿ
ಹೊದೆಯಬೇಕಾಗಿದೆ.

ಒಂದು ಮಧುರ ಹಾಡು ಮತ್ತೆ
ಮಬ್ಬಾದ ಚಿಕ್ಕಿಗಳ ಹೊಳಪು
ಈ ಜಗದ ಹುಚ್ಚರ ಸಂತೆಯಲಿ ಸಂತನಂತೆ
ನಿಲ್ಲುವ ಮಹಾ ಮೋಹಿಯ ಕಡು ಬಡತನದ
ಕಡಲಗಾಳಿ ಎದುರಿಸುವ, ಚಡಪಡಿಕೆಯ ಮುಪ್ಪು
ಸಾವರಿಸುವ ಶಕ್ತಿ ನೀ ನನ್ನೊಳಗೆ ತುಂಬಬೇಕಾಗಿದೆ.

ನಿಕೃಷ್ಟವಾದ ಬೌದ್ಧಿಕ ದ್ವೇಷ ಒಳಸುಳಿ
ರೋಷ ತುಂಬಿದ ಬಿರುನುಡಿ, ಜಂಜಡದ
ಗುದ್ದುಗಳು, ನನಗೆ ತಾಕದಂತೆ ಮತ್ತೆ
ಮಾಯದ ಗಾಯಗಳು ಕೀವು ತುಂಬದಂತೆ
ಹಸಿರು ಮರದಲ್ಲಿ ಪುಟ್ಟ ಹಕ್ಕಿಗಳ ಕಾಪಾಡಿದಂತೆ

ನನ್ನ ಮನಸ್ಸಿನಲಿ ಮಗುವಿನ ಮುಗ್ಧತೆ
ನೀ ಅರಳಿಸಬೇಕಾಗಿದೆ.

ಕೊನೆಗೆ ಹಿತವಾಗಿ ನಿನ್ನ ತಣ್ಣನೆಯ ಕೈಗಳು
ಕಣ್ಣುಗಳು ಮುಚ್ಚಲಿ, ಮತ್ತೆ ನನ್ನ ಈ ಪುಟ್ಟ
ಮನೆಯ ಚಾಪೆಯಲಿ ಮಲಗಿದಾಗಲೇ ಆ
ಪುರುಷ ಸಾವು ತಬ್ಬಲಿ, ಹೃದಯ ಅರಳಿದ
ಹಗುರ ಭಾವದಲಿ ನಾ ನೀಲಿ ಆಕಾಶಕ್ಕೆ
ನಿನ್ನ ಜೊತೆಗೂಡಿ ಹಾರಬೇಕಾಗಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಬಾವುಟ
Next post ಪಾಂಡುವಿನ ಪ್ರಯಾಣ

ಸಣ್ಣ ಕತೆ

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…