Home / ಕವನ / ಕವಿತೆ / ಕಾಂಡ ಬೇರುಗಳ ಕಲರವ

ಕಾಂಡ ಬೇರುಗಳ ಕಲರವ

ನೆಲದಡಿಯಲಿ ಮಲಗಿದ ಪ್ರೀತಿ
ಆತ್ಮಗಳು ಉಸಿರಾಡುತ್ತವೆ, ಮಂಜು
ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ
ಎಲೆಯ ಮರೆಯ ನಿಧಾನದ ಗಾಳಿ
ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ
ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ
ಬೆಳಕು.

ಎರೆಮಣ್ಣಿನಲಿ ಮುಸುಕಿನ ಗುದ್ದಾಟ ಮತ್ತೆ
ಕುಸುಮ ಅರಳಿ ಆಕಾಶಕ್ಕೆ ಮೊಗ ಮಾಡಿದ
ನೆಲವ ಚುಂಬಿಸಿದ ಅಗಾಧ ಆಕಾಶ ಪ್ರೀತಿ
ಹನಿಹನಿಯಾಗಿ ಬೆವರು ಭೂಮಿಗಿಳಿದ
ಮೀರಿದ ಬೆಳಕು ಕಂಡ ಹಕ್ಕಿಗಳ ಕಲರವ
ಒಡಲ ತುಂಬ ಕಂಪಿಸಿ ಘಮ್ಮೆನ್ನುವ ಕಣ್ಣ
ಬೆಳಕು.

ಭೂಮಿಯ ಆವರ್ತದಲ್ಲಿ ಅಣು ಅಣುವಿನ
ಸೂರ್ಯನ ಚಲನೆ, ಎದೆಯೊಳಕೆ ಇಳಿದು
ಸಳಸಳ ಮಿಂಚಿ ಮಾಯವಾಗುವ ಮೀನುಗಳ ಕಡಲ
ನೆತ್ತಿ ತಣಿಸುವ ಸುತ್ತ ಮುತ್ತಲಿನ ಹಸಿರು ಕಾವ್ಯ
ಕಾಯುವುದು ಪ್ರೀತಿಯಲಿ ಕಡು ಕತ್ತಲೆ ಮಳೆ
ಕಾನನದ ಹಕ್ಕಿ ಉಲಿದ ಹಾಡುಗಳು ಅರಳಿಸಿದವು
ಕವಿಯ ಒಡಲು.

ಅದರಾಚೆಯ ಮುಗಿಲ ಮೌನದ ಮೋಡಗಳು
ಗುಡುಗಿ, ಸುರಿದ ದೈವ್ಯ ನೆನಹು ಎಲ್ಲರ
ಮನಸ್ಸಿನಾಳಕೆ ಇಳಿದು ಅಲ್ಲಮ ಜಂಗಮನಾದ
ಇಷ್ಟಗಳ ನೆಲದಲಿ ಎಂತಹ ಜೀವ ಪವಾಡ
ಚಿಗುರಿದ ಮರಗಳ ಹೂಗಳ ಕಂಪನ ಮತ್ತೆ
ತೊಯ್ದ ಮಾಡು, ತೊಳೆದ ದಾರಿ ಅಮ್ಮನ ಒಲುಮೆಯಲಿ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...