ಕಾಂಡ ಬೇರುಗಳ ಕಲರವ

ನೆಲದಡಿಯಲಿ ಮಲಗಿದ ಪ್ರೀತಿ
ಆತ್ಮಗಳು ಉಸಿರಾಡುತ್ತವೆ, ಮಂಜು
ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ
ಎಲೆಯ ಮರೆಯ ನಿಧಾನದ ಗಾಳಿ
ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ
ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ
ಬೆಳಕು.

ಎರೆಮಣ್ಣಿನಲಿ ಮುಸುಕಿನ ಗುದ್ದಾಟ ಮತ್ತೆ
ಕುಸುಮ ಅರಳಿ ಆಕಾಶಕ್ಕೆ ಮೊಗ ಮಾಡಿದ
ನೆಲವ ಚುಂಬಿಸಿದ ಅಗಾಧ ಆಕಾಶ ಪ್ರೀತಿ
ಹನಿಹನಿಯಾಗಿ ಬೆವರು ಭೂಮಿಗಿಳಿದ
ಮೀರಿದ ಬೆಳಕು ಕಂಡ ಹಕ್ಕಿಗಳ ಕಲರವ
ಒಡಲ ತುಂಬ ಕಂಪಿಸಿ ಘಮ್ಮೆನ್ನುವ ಕಣ್ಣ
ಬೆಳಕು.

ಭೂಮಿಯ ಆವರ್ತದಲ್ಲಿ ಅಣು ಅಣುವಿನ
ಸೂರ್ಯನ ಚಲನೆ, ಎದೆಯೊಳಕೆ ಇಳಿದು
ಸಳಸಳ ಮಿಂಚಿ ಮಾಯವಾಗುವ ಮೀನುಗಳ ಕಡಲ
ನೆತ್ತಿ ತಣಿಸುವ ಸುತ್ತ ಮುತ್ತಲಿನ ಹಸಿರು ಕಾವ್ಯ
ಕಾಯುವುದು ಪ್ರೀತಿಯಲಿ ಕಡು ಕತ್ತಲೆ ಮಳೆ
ಕಾನನದ ಹಕ್ಕಿ ಉಲಿದ ಹಾಡುಗಳು ಅರಳಿಸಿದವು
ಕವಿಯ ಒಡಲು.

ಅದರಾಚೆಯ ಮುಗಿಲ ಮೌನದ ಮೋಡಗಳು
ಗುಡುಗಿ, ಸುರಿದ ದೈವ್ಯ ನೆನಹು ಎಲ್ಲರ
ಮನಸ್ಸಿನಾಳಕೆ ಇಳಿದು ಅಲ್ಲಮ ಜಂಗಮನಾದ
ಇಷ್ಟಗಳ ನೆಲದಲಿ ಎಂತಹ ಜೀವ ಪವಾಡ
ಚಿಗುರಿದ ಮರಗಳ ಹೂಗಳ ಕಂಪನ ಮತ್ತೆ
ತೊಯ್ದ ಮಾಡು, ತೊಳೆದ ದಾರಿ ಅಮ್ಮನ ಒಲುಮೆಯಲಿ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎದ್ದೇಳಿ ಎದ್ದೇಳಿ ಸೋದರರೇ
Next post ಅರಗಿನಮನೆಯಲ್ಲಿ ಪಾಂಡವರು

ಸಣ್ಣ ಕತೆ

  • ಬೆಟ್ಟಿ

    ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…