Home / ಕವನ / ಕವಿತೆ / ಕಾಂಡ ಬೇರುಗಳ ಕಲರವ

ಕಾಂಡ ಬೇರುಗಳ ಕಲರವ

ನೆಲದಡಿಯಲಿ ಮಲಗಿದ ಪ್ರೀತಿ
ಆತ್ಮಗಳು ಉಸಿರಾಡುತ್ತವೆ, ಮಂಜು
ಹನಿಗಳ ಮಧುರ ತಣ್ಣನೆಯ ಸ್ಪರ್ಶದಲಿ
ಎಲೆಯ ಮರೆಯ ನಿಧಾನದ ಗಾಳಿ
ಸವರಿ ತೇಲಿ ಹೋಗುತ್ತವೆ, ಪರಿತ್ಯಕ್ತ
ಎಲ್ಲಾ ಮನಸ್ಸುಗಳ ಮೂಲೆಯಲಿ ಲೋಕದ
ಬೆಳಕು.

ಎರೆಮಣ್ಣಿನಲಿ ಮುಸುಕಿನ ಗುದ್ದಾಟ ಮತ್ತೆ
ಕುಸುಮ ಅರಳಿ ಆಕಾಶಕ್ಕೆ ಮೊಗ ಮಾಡಿದ
ನೆಲವ ಚುಂಬಿಸಿದ ಅಗಾಧ ಆಕಾಶ ಪ್ರೀತಿ
ಹನಿಹನಿಯಾಗಿ ಬೆವರು ಭೂಮಿಗಿಳಿದ
ಮೀರಿದ ಬೆಳಕು ಕಂಡ ಹಕ್ಕಿಗಳ ಕಲರವ
ಒಡಲ ತುಂಬ ಕಂಪಿಸಿ ಘಮ್ಮೆನ್ನುವ ಕಣ್ಣ
ಬೆಳಕು.

ಭೂಮಿಯ ಆವರ್ತದಲ್ಲಿ ಅಣು ಅಣುವಿನ
ಸೂರ್ಯನ ಚಲನೆ, ಎದೆಯೊಳಕೆ ಇಳಿದು
ಸಳಸಳ ಮಿಂಚಿ ಮಾಯವಾಗುವ ಮೀನುಗಳ ಕಡಲ
ನೆತ್ತಿ ತಣಿಸುವ ಸುತ್ತ ಮುತ್ತಲಿನ ಹಸಿರು ಕಾವ್ಯ
ಕಾಯುವುದು ಪ್ರೀತಿಯಲಿ ಕಡು ಕತ್ತಲೆ ಮಳೆ
ಕಾನನದ ಹಕ್ಕಿ ಉಲಿದ ಹಾಡುಗಳು ಅರಳಿಸಿದವು
ಕವಿಯ ಒಡಲು.

ಅದರಾಚೆಯ ಮುಗಿಲ ಮೌನದ ಮೋಡಗಳು
ಗುಡುಗಿ, ಸುರಿದ ದೈವ್ಯ ನೆನಹು ಎಲ್ಲರ
ಮನಸ್ಸಿನಾಳಕೆ ಇಳಿದು ಅಲ್ಲಮ ಜಂಗಮನಾದ
ಇಷ್ಟಗಳ ನೆಲದಲಿ ಎಂತಹ ಜೀವ ಪವಾಡ
ಚಿಗುರಿದ ಮರಗಳ ಹೂಗಳ ಕಂಪನ ಮತ್ತೆ
ತೊಯ್ದ ಮಾಡು, ತೊಳೆದ ದಾರಿ ಅಮ್ಮನ ಒಲುಮೆಯಲಿ
*****

Tagged:

Leave a Reply

Your email address will not be published. Required fields are marked *

ಬಣಸಾಲೆ ಮುಂದಿನಿಂದ ಹೆಜ್ಜೆ ಹಾಕುವಾಗ ಹೊತ್ತು ಕಂತಿದ್ದು ಲಕ್ಷ್ಯಕ್ಕೆ ಬಂದಿರಲಿಲ್ಲ. ಆಚೀಚಿನ ಹನೆಮರದೆತ್ತರದ ತೇಗ-ಮಾವುಗಳ ಟಿಸಿಲುಗಳಲ್ಲಿ ಹಕ್ಕಿಗಳ ಗರಿ ಒದರುವ ಸರಪರ. ತಾರಕ ಸ್ವರದ ಮಕ್ಕಳಾಟ ವೀಕ್ಷಿಸುತ್ತಾ ರಸ್ತೇಲಿ ಬಿದ್ದಿದ್ದ ಸಣ್ಣ ಸಣ್ಣ ಕಲ್ಲುಗಳನ್ನು ಕಾಲಿನಿಂದ ಚಿಮ್ಮುತ್ತಾ...

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...