ಮೋಹನ ಮುರಳಿ

ಎಲ್ಲಿಯದೋ ಒಂದು ಧ್ವನಿ
ಅನುರಣುಸುತ್ತಿದೆ, ಎದೆಯ ಆಳದಲಿ
ನಿತ್ಯ ನೂತನದ ತಂಗಾಳಿಯ ಅಲೆಗಳು
ಅಪ್ಪಳಿಸಿವೆ ನದಿಯ ದಂಡೆಯಲಿ.

ಕೇದಿಗೆ ಅರಳಿ ಘಮ್ಮೆಂದು ಸೂಸಿದ
ಪರಿಮಳ ಎಲ್ಲೆಲ್ಲೂ ಹರಡಿ ನದಿಗುಂಟ
ಹರಿದು ಮೂರು ಸಂಜೆಯ ಹೊತ್ತು
ನೀಲಾಂಜನದ ಬೆಳಕು ಹರಡಿದ ತಂಪು.

ಹೂವಿನಿಂದ ಹೂವಿಗೆ ಹಾರುವ ಚಿಟ್ಟೆಗಳ
ಸಂಭ್ರಮದ ಮುಂಜಾನೆ, ಸೂರ್ಯ ತನ್ನ
ಕ್ಯಾಮರಾ ಕಣ್ಣುಗಳಿಂದ ಪ್ಲಾಶ್‌ಗೊಳಿಸಿದಾಗ
ತೊಟ್ಟಿಲಲ್ಲಿ ಮಲಗಿದ ಕಂದನ ಕಣ್ಣುಗಳ ತುಂಬ
ಹೊಂಬೆಳಕು

ನವಿರಾದ ಪ್ರೀತಿ ಅರಳಿದ ಸಮಯ,
ಕವಿತೆಯ ಕೂದಲುಗಳು ಉದ್ದ ಜಡೆ ಹೆಣೆದು
ಕ್ಯಾದಿಗೆ ಮುಡಿದು, ಚಿಟ್ಟೆಗಳ ಅರಳಿಸಿ ಜೋತಾಡಿದಾಗ
ನೀನು ಬಂದು ನನ್ನ ಮನೆಯ ಬಾಗಿಲು ತಟ್ಟಿದೆ.

ಕೊನರಿದ ಕೊರಡು ಬಿದುರಿನಿಂದ ಹೊರಟ
ನಿನ್ನ ನಿನಾದ ರಾತ್ರಿಯ ಬೆಳದಿಂಗಳಲಿ
ಪಸರಿಸಿ ಸವಿ ಸಮ್ಮಿಲನದ ಸುಖದಲಿ
ಮನೆ, ಗಂಡ, ಮಗು ಎಲ್ಲರೂ ದೂರ ಉಳಿದ
ಇರಳು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡ ಕನ್ನಡ
Next post ಬಕಾಸುರ ಸಂಹಾರ

ಸಣ್ಣ ಕತೆ

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…