Home / ಕವನ / ಕವಿತೆ / ಗುಹೇಶ್ವರ

ಗುಹೇಶ್ವರ

ಆದಿ ಅನಾದಿ ಇಲ್ಲದ ಬಟ್ಟ ಬಯಲಿನ
ಹೂವಿನ ಕಂಪನ ನೀರಿನ ಕಂಪನ ಮನಸ್ಸಿನ
ಕಂಪನ ದೇಹದ ಕಂಪನ ಎಲ್ಲವನ್ನೂ ಸಮೀಕರಿಸಿ,
ಉಂಟು ಇಲ್ಲ ಎಂಬವರ ಲೆಕ್ಕಕ್ಕೆ ಚುಕ್ತಾ ಮಾಡುವ
ಮಿಂಚು ಕತ್ತಲೆಗಳ ನಡುವೆ ಸೆಳೆವ ಹೊಸ ಪದ
ಪ್ರಯೋಗ ಗುಹೇಶ್ವರ.

ದೇಶ ಕಾಲಗಳ ಇತಿಹಾಸದ ಪುಟಗಳ ಸರಿಸಿ,
ಇದ್ದ ಬಯಲಿನ ಘಮ ಘಮ ಆಕಾಶಕ್ಕೆ
ಪಸರಿಸಿ, ಎಲ್ಲಾ ದಿಕ್ಕುಗಳಲ್ಲಿ ಬೆಳಕ ಕಿರಣಗಳ
ಹರಡಿ ಹಾಸಿ ಇದು ಕಾಣಿ ನಿಜದ ನೆರಳು
ಪದಗಳ ಅರ್ಥಗಳ ಗಂಟು ಕಟ್ಟಿ ಮಾಯೆಯ
ಗೆಜ್ಜೆಯ ಹೊಸ ರಿಂಗಣ ಗುಹೇಶ್ವರ.

ಉರಿದ ಶರೀರದ ಬೂದಿ ಚೆಲ್ಲಿ ಹರಡಿ ಹಾಸಿದ
ಬಯಲು ಅಣು ಅಣುವಿನಲಿ ಲೋಕದ ತುಂಬ
ಮೊಗ್ಗುಗಳು ಹೂಗಳಾಗಿ ಅರಳಿ ಘಮ ಹರಡಿ,
ಅವನ ಪ್ರಜೆಯ ಒಳಗೂಡಿದ ಒಳ ಹರವು
ಮೋಹ ಮರುಳದ ಲಯವಾಗಿ ಕರಗಿದ ಜಂಗಮ
ಸರಸವಾದ ಗುಹೇಶ್ವರ.

ಕಣ್ಣು ಕಕ್ಷೆ ಮೀರಿ ಅರಳಿದ ಆಂತರ್ಯದ ಚೆಲುವು
ಮಾಯೆಯ ಮುಸಕ ಎಳೆದು ಆ ಮಾತು ಈ
ಮಾತ ಜಗದ ಸಂತೆಯ ತುಂಬ ಶರಣ
ಸತಿ ಲಿಂಗಪತಿ, ಭವದ ದಾವತಿ, ಶರೀರದ
ಅವಸ್ಥೆ ಅಭೇಧ್ಯನರಿಯವರ ಮರಳು ಮಾಡಿದ
ಗುಹೇಶ್ವರ ನಿರಂತರ ಸಾವಧಾನಿ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...