Home / ಕವನ / ಕವಿತೆ / ಮನವೆಂಬ ಮರ್ಕಟ

ಮನವೆಂಬ ಮರ್ಕಟ

ಹರಿಯಗೊಡದಿರು ಮನವೇ
ಎಲ್ಲೆಂದರಲ್ಲಿ
ಮನವು ಮರ್ಕಟವೆಂಬ
ಮಾತು ನಿಜವಿಲ್ಲಿ.
ಓಡುವುದು ನದಿಯಂತೆ
ಬೀಸುವ ಗಾಳಿಯಂತೆ
ಕತ್ತಿಯ ಅಲುಗಿನಂತೆ
ಸುಳಿಯುವುದು ಕ್ಷಣ ಕ್ಷಣ
ಚಪಲ ಚಿತ್ತವ ಹಿಡಿದು ಕಟ್ಟುವ
ಇಂದ್ರಿಯ ನಿಗ್ರಹ ಶಕ್ತಿ
ಇದ್ದರೆ ನೀನಾಗುವೆ ಮಹಾವ್ಯಕ್ತಿ
ಯತ್ನದಿಂದ ಪ್ರಯತ್ನದಿಂದ
ಸಾಧನೆಯ ಬಲದಿಂದ
ಮನಕೆ ಹಾಕು ಲಗಾಮು
ನಿನಗೆ ತೋರುವ ಹಾದಿಯಲಿ
ಛಲದ ಅಭಿವ್ಯಕ್ತಿಯಲಿ
ಮನವ ಮುನ್ನಡೆಸು
ಮೂಗು ತೂರಿಸದಿರು
ಪರರ ವಿಷಯಾಸಕ್ತಿಗೆ
ಚಿಂತೆಯ ಚಿತೆಯಲಿ
ಬೇಯದಿರು ಬರಿದೆ
ಗಾಳಿಯನು ಗುದ್ದಿ
ಮೈ ನೋಯಿಸುವ ಪರಿ
ದುಡುಕುತನದ ದೂರ ಸರಿ
ಚಿಂತಿಸದಿರು ವ್ಯರ್ಥ ಜಿಜ್ಞಾಸೆಯಲಿ
ಕತ್ತಲಿನ ಗರ್ಭವ ಸೀಳಿ
ಹೊರಬರಲಿ ವಾಸ್ತವತೆಯ ಬೆಳಕು
ಹಣ ಅಂತಸ್ತು ಅಧಿಕಾರ
ಇರಬಹುದು ಬಾಳಿಗೆ ಸಾಕಾರ
ಜೀವನವೆಂದರೆ ನೂರು ಅರ್ಥ
ಅರ್ಥದಿಂದಲೇ ವೇದಾಂತ
ಸಿದ್ಧಾಂತ
ಅರಿತು ನಡೆದರೆ ಸುಖಾಂತ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...