ಮನವೆಂಬ ಮರ್ಕಟ

ಹರಿಯಗೊಡದಿರು ಮನವೇ
ಎಲ್ಲೆಂದರಲ್ಲಿ
ಮನವು ಮರ್ಕಟವೆಂಬ
ಮಾತು ನಿಜವಿಲ್ಲಿ.
ಓಡುವುದು ನದಿಯಂತೆ
ಬೀಸುವ ಗಾಳಿಯಂತೆ
ಕತ್ತಿಯ ಅಲುಗಿನಂತೆ
ಸುಳಿಯುವುದು ಕ್ಷಣ ಕ್ಷಣ
ಚಪಲ ಚಿತ್ತವ ಹಿಡಿದು ಕಟ್ಟುವ
ಇಂದ್ರಿಯ ನಿಗ್ರಹ ಶಕ್ತಿ
ಇದ್ದರೆ ನೀನಾಗುವೆ ಮಹಾವ್ಯಕ್ತಿ
ಯತ್ನದಿಂದ ಪ್ರಯತ್ನದಿಂದ
ಸಾಧನೆಯ ಬಲದಿಂದ
ಮನಕೆ ಹಾಕು ಲಗಾಮು
ನಿನಗೆ ತೋರುವ ಹಾದಿಯಲಿ
ಛಲದ ಅಭಿವ್ಯಕ್ತಿಯಲಿ
ಮನವ ಮುನ್ನಡೆಸು
ಮೂಗು ತೂರಿಸದಿರು
ಪರರ ವಿಷಯಾಸಕ್ತಿಗೆ
ಚಿಂತೆಯ ಚಿತೆಯಲಿ
ಬೇಯದಿರು ಬರಿದೆ
ಗಾಳಿಯನು ಗುದ್ದಿ
ಮೈ ನೋಯಿಸುವ ಪರಿ
ದುಡುಕುತನದ ದೂರ ಸರಿ
ಚಿಂತಿಸದಿರು ವ್ಯರ್ಥ ಜಿಜ್ಞಾಸೆಯಲಿ
ಕತ್ತಲಿನ ಗರ್ಭವ ಸೀಳಿ
ಹೊರಬರಲಿ ವಾಸ್ತವತೆಯ ಬೆಳಕು
ಹಣ ಅಂತಸ್ತು ಅಧಿಕಾರ
ಇರಬಹುದು ಬಾಳಿಗೆ ಸಾಕಾರ
ಜೀವನವೆಂದರೆ ನೂರು ಅರ್ಥ
ಅರ್ಥದಿಂದಲೇ ವೇದಾಂತ
ಸಿದ್ಧಾಂತ
ಅರಿತು ನಡೆದರೆ ಸುಖಾಂತ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ನನ್ನ ಗಂಡ ಮಿಕ್ಕವರಂತಲ್ಲ
Next post ದೂರು ಪೆಟ್ಟಿಗೆ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…