ಸಂಕ್ರಮಣ ಕಾಲ

ಬದಲಾಗಿದೆ ಕಾಲ
ಸೂಕ್ಷ್ಮಾತಿಸೂಕ್ಷ್ಮ
ಸಂಕ್ರಮಣ ಕಾಲ
ಅಡಿಯಿಡುವ ಮುನ್ನ
ನುಡಿ ಜಾರುವ ಮುನ್ನ
ಎಚ್ಚರವಿರಲಿ
ಹೂವೇ ಹಾವಾಗಿ
ಪ್ರಕೃತಿ ವಿಕೃತಿಯಾಗಿ
ಅಮೃತವೇ ವಿಷವಾಗಿ
ಜೀವ ತೆಗೆಯಬಹುದು
ಎಚ್ಚರವಿರಲಿ
ಮಾತು ಮುತ್ತಾಗದೇ
ಮೃತ್ಯುವಾಗಿ
ನಗುವ ಬೆಳದಿಂಗಳು
ಕ್ಷಣದಲ್ಲಿ ಕಪ್ಪಾಗಿ
ಮೇಲೆರಗಬಹುದು
ಎಚ್ಚರವಿರಲಿ
ಬೆಳ್ಳಗಿರುವುದು ಹಾಲಲ್ಲ
ಹೊಳೆಯುವುದು ಚಿನ್ನವಲ್ಲ
ಸಣ್ಣ ತೂತಲಿ ಹಿರಿದು ಹಿಂಜಿ
ತೇಪೆಯಾಗಬಹುದು
ಸಣ್ಣ ಗಾಯ ರಣರಂಪಾಗಿ
ಕಾಲು ಕತ್ತರಿಸಬಹುದು
ಎಚ್ಚರವಿರಲಿ.
ಬದಲಾಗಿದೆ ಕಾಲ
ಬದುಕಿನ ಜಾಲ
ಎಚ್ಚರವಿರಲಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಆಸೆ ರೋಷ
Next post ಗಗನದಂಗಳ ಹಾರು ಹಕ್ಕಿಯೆ

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…