Home / ಕವನ / ಕವಿತೆ / ಯಾರಿವರು?

ಯಾರಿವರು?

ಎಲ್ಲೋ ನೋಡಿದ್ದೇನೆ ಇವರನ್ನು
ಕೇಳಿದ್ದೇನೆ ಮಾತುಗಳನ್ನು
ಯಾರಿವರು?
ಅಟ್ಟದಿಂದ ಬೆಟ್ಟಕ್ಕೆ ಏರಿಸಿ
ಧೊಪ್ಪನೆ ಕೆಡುವವರು
ಕಂಬಿ ಇಲ್ಲದೆ ರೈಲು ಬಿಡುವ
ಅತಿ ಮಾನುಷರು.
ಮಾತಿನಲ್ಲೇ ಮನೆ ಕಟ್ಟಿ
ಮಾತಿನಲ್ಲೇ ಹೊಟ್ಟೆ ಬಟ್ಟೆ
ಮಾತಿನಲ್ಲೇ ಸ್ವರ್ಗ ತೋರಿಸುವ
ಮರುಳು ಮಾನವರು.
ಮಾತಿನಲ್ಲೇ ಸಮಾಧಿ ಕಟ್ಟಿ
ಸಮಾಧಿ ಮೇಲೆ ಗದ್ದುಗೆ
ಗದ್ದುಗೆಯಲ್ಲಿ ವಿರಾಜಿಸುವ
ಗದ್ದಲ ಶೂರರು.
ಅತ್ತಿತ್ತಗಲದೆ ಸುತ್ತ ನೋಡದೆ
ಅಧಿಕಾರದ ಚುಕ್ಕಾಣಿ ಹಿಡಿದು
ಮರದಿಂದ ಮರಕ್ಕೆ ಜಿಗಿಯುವ
ಮರ್ಕಟ ಜಾತಿಯವರು.
ಎಳ್ಳಷ್ಟಿಲ್ಲ ತತ್ತ್ವ ಸಿದ್ಧಾಂತ
ಅರ್ಥವಿಲ್ಲದ ಆದರ, ಆದರ್ಶ
ಅಧಿಕಾರದ ಲಾಲಸೆ ಹಣದ ಮೋಹ
ಗೋರಿಗೋಗುವ ಸಮಯವಾದರೂ
ಬಿಡದ ಕುರ್ಚಿಯ ವ್ಯಾಮೋಹ
ಸ್ವಾರ್ಥ ಸಾಧಕರಿವರು
ಯಾರಿವರು?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...