ಎಲ್ಲೋ ನೋಡಿದ್ದೇನೆ ಇವರನ್ನು
ಕೇಳಿದ್ದೇನೆ ಮಾತುಗಳನ್ನು
ಯಾರಿವರು?
ಅಟ್ಟದಿಂದ ಬೆಟ್ಟಕ್ಕೆ ಏರಿಸಿ
ಧೊಪ್ಪನೆ ಕೆಡುವವರು
ಕಂಬಿ ಇಲ್ಲದೆ ರೈಲು ಬಿಡುವ
ಅತಿ ಮಾನುಷರು.
ಮಾತಿನಲ್ಲೇ ಮನೆ ಕಟ್ಟಿ
ಮಾತಿನಲ್ಲೇ ಹೊಟ್ಟೆ ಬಟ್ಟೆ
ಮಾತಿನಲ್ಲೇ ಸ್ವರ್ಗ ತೋರಿಸುವ
ಮರುಳು ಮಾನವರು.
ಮಾತಿನಲ್ಲೇ ಸಮಾಧಿ ಕಟ್ಟಿ
ಸಮಾಧಿ ಮೇಲೆ ಗದ್ದುಗೆ
ಗದ್ದುಗೆಯಲ್ಲಿ ವಿರಾಜಿಸುವ
ಗದ್ದಲ ಶೂರರು.
ಅತ್ತಿತ್ತಗಲದೆ ಸುತ್ತ ನೋಡದೆ
ಅಧಿಕಾರದ ಚುಕ್ಕಾಣಿ ಹಿಡಿದು
ಮರದಿಂದ ಮರಕ್ಕೆ ಜಿಗಿಯುವ
ಮರ್ಕಟ ಜಾತಿಯವರು.
ಎಳ್ಳಷ್ಟಿಲ್ಲ ತತ್ತ್ವ ಸಿದ್ಧಾಂತ
ಅರ್ಥವಿಲ್ಲದ ಆದರ, ಆದರ್ಶ
ಅಧಿಕಾರದ ಲಾಲಸೆ ಹಣದ ಮೋಹ
ಗೋರಿಗೋಗುವ ಸಮಯವಾದರೂ
ಬಿಡದ ಕುರ್ಚಿಯ ವ್ಯಾಮೋಹ
ಸ್ವಾರ್ಥ ಸಾಧಕರಿವರು
ಯಾರಿವರು?
*****
Related Post
ಸಣ್ಣ ಕತೆ
-
ತೊಳೆದ ಮುತ್ತು
ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…
-
ನಿರಾಳ
ಮಂಗಳೂರಿನ ಟೌನ್ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಕ್ಷಮೆ
ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…
-
ಅಜ್ಜಿಯ ಪ್ರೇಮ
ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…