Home / ಕವನ / ಕವಿತೆ / ಚೈತ್ರಗಾನ

ಚೈತ್ರಗಾನ

ಚೈತ್ರ ಬಂತು ಚೈತ್ರ
ಬದುಕು ಬವಣೆಯಾತ್ರೆ
ಅಳುವಿರಲಿ, ನಗುವಿರಲಿ
ಕಥೆಗೆ ತಕ್ಕ ಪಾತ್ರ
ಅಪ್ಪ ಅಮ್ಮ ಅಣ್ಣ ತಂಗಿ
ಜೊತೆಯಾದರು ಪಯಣಕೆ
ನಲಿವಿನಿಂದ ನೋವು ನುಂಗಿ
ನಡೆದೆವು ದೂರ ತೀರಕೆ
ತೀರ ದೂರ ಬದುಕು ಭಾರ
ಸೋಲುಂಡವು ಮೈಮನ
ಉರಿಯೋ ಬಿಸಿಲು ಸುರಿಯೋ ಮಳೆಯೋ
ಜಡವಾಯಿತು ಚೇತನ.
ಚೈತ್ರ ಬಂತು ಹರುಷ ತಂತು
ಸಂಭ್ರಮದಿ ಸಾಗರ
ಹಳತು ಬೇರು ಹೊಸ ಚಿಗುರು
ಬೇವು ಬೆಲ್ಲ ಬಂಧುರ
ಉಸಿರಾಯಿತು ಹಸಿರಾಯಿತು.
ಬದುಕಾಯಿತು ನಂದನ
ಚಿಗುರೊಡೆದು ಪಲ್ಲವಿಸಿತು
ಚೈತನ್ಯದ ಹೂಬನ
ಹೂವು ಗಂಧ ತುಂಬಿ ಬಂದ
ಝೇಂಕಾರದ ನಾದ
ಮನಸೆಳೆಯಿತು ಕಣ್ ತಣಿಸಿತು
ಪ್ರಕೃತಿ ಪ್ರಮೋದ.
ಮಾಮರದ ಕೋಗಿಲೆಯ
ಸುಶ್ರಾವ್ಯ ಗಾನ
ಎದೆಯ ಹಕ್ಕಿ ಪ್ರತಿಧ್ವನಿ
ತಂತನಾನ ತಾನ
ಚಿಗುರೆಲೆಗಳ ಆಗಮನ
ಹಣ್ಣೆಲೆಗಳ ನಿರ್ಗಮನ
ಉದಯಾಸ್ತಮಾನ
ಸೃಷ್ಠಿ ಸಂವಿಧಾನ.
ಮನ ಮನಗಳ ಮಧುರ ಬೆಸುಗೆ
ಭಾವಾತಿಬಂಧನ
ಸರಸ ವಿರಸ ಸಾಮರಸ್ಯ
ಸುಖದ ಸೋಪಾನ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...