ಸಂಕ್ರಾಂತಿ

ಹುಟ್ಟು ಸಾವುಗಳ, ನೋವು ನಲಿವುಗಳ
ಬದುಕಿದು ಬರೀ ಭ್ರಾಂತಿ
ಆಸೆನಿರಾಸೆಗಳ ನಡುವೆ ತೂಗಿದೆ
ಸಂತಸದ ಸಂಕ್ರಾಂತಿ
ಮಾಗಿಯ ಪೊರೆಯದು ಕಳಚುತ್ತಾ ತೆರಳಿದೆ
ಕಾಣಲು ಹೊಸ ವರುಷ
ಸಿಹಿ ಸಿಹಿ ಮಾತಿನ ತೋರಣ ಕಟ್ಟಿದೆ
ಸಂಕ್ರಾಂತಿಯ ಹರುಷ
ಹೂಬನವೆಲ್ಲಾ ಉದುರಿ ಚಿಗುರಿದೆ
ಚೈತ್ರದ ಸ್ವಾಗತಕೆಂದು
ರವಿಯು ರಂಗಿನ ರಥ ಏರಿ ಬರುವ
ರಥಸಪ್ತಮಿಯಂದು.
ದೇವನ ಕರುಣೆಯ ಅಲೆಯಲ್ಲಿ ತೇಲುತ್ತಾ
ಸಾಗಿದೆ ಬಾಳಿನ ದೋಣಿ
ಸ್ನೇಹದಿ ಎಳ್ಳು ಬೆಲ್ಲವ ಹಂಚುತ್ತಾ
ನುಡಿಯಿರಿ ಸರಸದ ಸವಿವಾಣಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ನೀನು ನಾನು
Next post ಮಲಗಿದ್ದೆ

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys