ಬಾಹುಬಲಿ ಕರುನಾಡ ಕಲಿ
ಶೌರ್ಯ ಪರಾಕ್ರಮದ ಹುಲಿ
ಭರತನ ಪರಾಜಯಿಸಿದ ವೀರಾಗ್ರಣಿ
ಭಾರತ ಮಣ್ಣಲಿ ನಿಂತ ಹೊನ್ನಿನ ಗಣಿ
ಸೌಂದರ್ಯ ಔನತ್ಯಗಳ ಮಕುಟಮಣಿ
ವೀರ ರಣಾಂಗಣದೆ ಸೋದರನ ಸೋಲಿಸಿ
ಆಸೆ ಆಕಾಂಕ್ಷೆಗಳೆಲ್ಲವನು ಕಡೆಗಣಿಸಿ
ನಿಂತಿರುವೆ ಯೋಗಿಯಾಗಿ ತ್ಯಾಗಿಯಾಗಿ
ಸತ್ಯ ಅಹಿಂಸಾ ಧರ್ಮದ ಪ್ರತಿಬಿಂಬವಾಗಿ
ಕುಬ್ಬ ಮಾನವರೆದುರು ಎತ್ತರೆತ್ತರ
ಅಭಿಮಾನದಲಿ ಬೆಳೆದ ಮುಗಿಲೆತ್ತರ
ಕಣ್ಣಿಗೆಟುಕದ ಶ್ರೀಮಂತ ಧೀಮಂತ ಮೂರುತಿ
ಜಗವಳಿದರೂ ಉಳಿವುದು ನಿನ್ನ ಕೀರುತಿ
*****
Related Post
ಸಣ್ಣ ಕತೆ
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಆವರ್ತನೆ
ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…
-
ಒಂಟಿ ತೆಪ್ಪ
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…