ನಂದಾದೀಪ

ಹರಿದ ಸೀರೆಯಲಿ ನೂರೆಂಟು
ತೇಪೆಯ ಚಿತ್ತಾರ
ಅರಿಶಿನದ ಓಕುಳಿ ಕೆನ್ನೆಗೆ
ಹಣೆಯಲಿ ಕಾಸಿನಗಲದ
ಕುಂಕುಮದ ಸಿಂಗಾರ
ಮುಡಿಯಲ್ಲಿ ಮಾಸದ ಹೂವಿನ ದಂಡೆ
ಮುಗ್ಧ ಮಗುವಿನ ಮೊಗ
ಅಲ್ಲಿ ನಗುವೆಂಬ ನಗ
ಕಂಗಳಲ್ಲಿ ಬತ್ತದ ವಾತ್ಸಲ್ಯದ ಒರತೆ
ಆಧುನಿಕ ಗಂಧಗಾಳಿಯ ಕೊರತೆ
ಕಡಲಿಗೂ ಸಮನಾಗದ
ಮಮತೆಯ ಬಿಂದು
ಆಗಸದ ಪಾತ್ರಕ್ಕೂ ಹಿರಿದು
ಕಾರುಣ್ಯಸಿಂಧು
ಮಾತಿನಲಿ ಕುಗ್ಗದ ಅಗಾಧ ಪ್ರೀತಿ
ಮರುಳಾಗಿಸಿ ಮಣಿಸುವ ಮಾಂತ್ರಿಕ ಶಕ್ತಿ
ಮುಚ್ಚುಮರೆಯಿಲ್ಲದ ಬಿಚ್ಚುನುಡಿ
ಕಪಟ ಮೋಸವರಿಯದ ಶುದ್ಧ ಕನ್ನಡಿ
ಗಂಧದ ಮರ ಬೇಕಿಲ್ಲ ಉಪಮೆಗೆ
ಕರ್ಪೂರದಾರತಿ ಕಾಂತಿ ಕಂಗಳೊಳಗೆ
ನಿನ್ನೆ ನಾಳೆಗಳ ಚಿಂತೆ ತೊರೆದು
ಬೇಕು ಬೇಡಗಳ ಪಟ್ಟಿ ಕಿತ್ತೆಸೆದು
ಉರಿವ ಒಲೆಯೊಳಗೆ ಕನಸು,
ಕಲ್ಪನೆಗಳ ಸುಟ್ಟ ಬೂದಿ.
ವಾಸ್ತವತೆಯ ಪರಿಧಿಯಲ್ಲಿ
ಗರಗರ ತಿರುಗುವ ಗಾಣದೆತ್ತು
ಅಪ್ಪ ಹಾಕಿದ ಲಕ್ಷ್ಮಣ ರೇಖೆ
ಮೀರಿ ದಾಟಿದ ಭಯಭಕ್ತಿ
ತುತ್ತು ಅನ್ನ ಹಿಡಿಯಷ್ಟು ಪ್ರೀತಿ
ಪಂಚಾಮೃತವೆನ್ನುವ ಪರಮ ತೃಪ್ತಿ
ನೂರು ದೇವರ ನಿವಾಳಿಸಿ
ಒಗೆಯಬೇಕಿವಳ ಮುಂದೆ
ಕರುಳು ಬತ್ತಿಯ ನೇದು
ನೆತ್ತರ ತೈಲವನೆರೆದು
ಒಡಲ ಕುಡಿಗಳ ಬೆಳಗುವ
ನಿತ್ಯ ಉರಿಯುವ ನಂದಾದೀಪ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಚನ ವಿಚಾರ – ಹಸಿವು, ಸುಳ್ಳು, ಅನಿವಾರ್ಯ
Next post ಬ್ರಹ್ಮ ಮಾನಸ ಸರೋವರದಲಿ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…