“ಸಾವು” ಪದವೇ ಭಯಂಕರ ಭೀಕರ
ಎದೆ ನಡುಗಿಸುವ ಎರಡಕ್ಷರ
ಹುಡುಕಿದರೂ ಸಿಕ್ಕದು ನೀನಿಲ್ಲದ ಜಾಗ
ನಿನ್ನ ನಿರ್ನಾಮಕ್ಕೆ ಮಾಡುತಿಹರು ಮಹಾಯಾಗ
ಸಾವಿಲ್ಲದ ಮನೆಯ ಸಾಸಿವೆ
ತರಲು ಹೇಳಿದ ಬುದ್ಧ
ಸಂಸಾರವೇ ತೊರೆದು ಎದ್ದ
ಬಯಸುವವರಾರು ನಿನಗೆ ಸ್ವಾಗತ
ಬೇಡವೆಂದರೂ ಬರುವ ಅಭ್ಯಾಗತ
ನಿನ್ನಲಿಲ್ಲ ಮೇಲುಕೀಳೆಂಬ ಪಕ್ಷಪಾತ
ವಿಶಾಲ ಮನೋಭಾವದ ಧೀಮಂತ
ನಿನ್ನಲ್ಲಿದೆಯೇ ಕಿಂಚಿತ್ತಾದರೂ ಕರುಣೆ
ಅರಿವಾದರೆ ತಾನೇ ಮಾನವನ ಬವಣೆ
ಬಡವ ಶ್ರೀಮಂತ ಮುದುಕ ಯುವಕ
ಹಾಲು ಹಸುಳೆಯ ಬಿಡದ ಕಿರಾತಕ
ನೀನೆಂದರೆ ನಿರ್ಭಯ ನಿರಾಕಾರ
ನಿರ್ಲಕ್ಷ್ಯ ನಿರ್ಲಜ್ಜತೆಯ ಸಾಕಾರ
ನೀನಿದ್ದೆಡೆ ಭಯ ಆತಂಕ ಸ್ವರೂಪ
ಅನುಕಂಪ ಆರ್ತನಾದದ ಮೂರ್ತರೂಪ.
*****
Related Post
ಸಣ್ಣ ಕತೆ
-
ಸಂಶೋಧನೆ
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ಮುಗ್ಧ
ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…