Home / ಕವನ / ಕವಿತೆ / ಬದಲಾಗದವರು

ಬದಲಾಗದವರು

ಬೆನ್ನು ಬಾಗಿಸಿಕೊಂಡು ತಂದುದನ್ನು
ಅಟ್ಟುಕೊಂಡು ಉಟ್ಟುಕೊಂಡು
ಪಾಡು ಪಟ್ಟುಕೊಂಡು
ಜೀ ಹುಜೂರ್ ಹಾಡಿಕೊಂಡು
ಉಸಿರು ಬಿಡಲು
ಅಪಣೆ ಬೇಡಿಕೊಂಡು
ಕೀ ಕೊಟ್ಟ ಗೊಂಬೆಗಳಂತೆ
ಕುಣಿಯುವವರು ನಾವು
ಕುಣಿಸುವವರು ನೀವು.
ನಿಮ್ಮ ಪಾದಕ್ಕೆ ಮೂಗುದಾರಕ್ಕೆ
ಮಣಿದು ತಾಳಕ್ಕೆ ಕುಣಿದು
ಇಷ್ಟಾನಿಷ್ಟಗಳ ಒರೆಹಚ್ಚಿ
ನಿಮ್ಮ ಭಾಗ್ಯದ ಪ್ರಗತಿಗೆ
ಹಿರಿಮೆಗೆ ಗರಿಮೆಗೆ
ಕುಲದ ಉದ್ಧಾರಕ್ಕೆ
ಬೇಡುವವರು ನಾವು
ಬೇಡಿಸುವವರು ನೀವು.
ಕಾಲನ ಪರಿಧಿಯೊಳಗೆ ಏಳುತ್ತಾ
ಬೀಳುತ್ತಾ ಕನಸುಗಳ ಕತ್ತರಿಸುತ್ತಾ
ಬವಣೆಗಳಲ್ಲೇ ಸುಖವನ್ನರಸುತ್ತಾ
ನೋವಿನಲ್ಲೂ ನಗುವ ಕಾಣುತ್ತಾ
ಹಣೆಬರಹವ ಹಳಿಯುತ್ತಾ
ನಿಂತ ನೀರಾಗಿ ನೀರಲ್ಲೇ ಕರಗಿ
ಕೊಳೆಯುವವರು ನಾವು
ಕೊಳೆಯಿಸುವವರು ನೀವು.
ಆರಕ್ಕೇರದೆ ಮೂರಕ್ಕಿಳಿಯದೆ
ಇತ್ತಲೂ ಇಲ್ಲದೇ ಅತ್ತಲೂ ಸಲ್ಲದೇ
ಹಳೆಯದನ್ನು ಬಿಡಲಾಗದೆ
ಹೊಸದನ್ನು ಅಪ್ಪಿಕೊಳ್ಳದೆ
ದ್ವಂದ್ವದಲಿ ಸೆಣಸುತ್ತಾ
ಬದಲಾದರೂ ಕಾಲ ದೇಶ ಸಂಸ್ಕೃತಿ
ಬದಲಾಗದವರು ನಾವು
ಬದಲಾಗಿಸದವರು ನೀವು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...