ಸಾವು ಹೂವು

ನಾನು ನನ್ನನು ತೊರೆದೆ
ಧ್ಯಾನ ಗಾನದಿ ಬೆರೆದೆ
ಭಾನವೇರಿತು ಹರಿದು ಸಕಲ ಪರದೆ

ಭಾವಭಕ್ತಿಯ ಭರದೆ
ಜೀವ ಅರ್‍ಪಿಸಿ ಕರೆದೆ
ಸಾವುನೋವಿನ ತಡೆಯನೊಡೆದು ಮೆರೆದೆ

ಆತನಾಡುವ ಲೀಲೆ
ಭಿತ್ತಿಯಿಲ್ಲದ ಶಾಲೆ
ಮಾತು ಮೌನದ ಜ್ವಾಲೆ ಬೆಳಕಿನೋಲೆ

ತಿಮಿರ ಚಕ್ರದ ಮೂಲೆ
ಸಮರ ಸಾಧನ ಶಾಲೆ
ಅಮರರಾಳಿಕೆಯಲ್ಲಿ ಅಲ್ಲಿ ಸೋಲೆ?

ಯಂತ್ರದೊಳಗಿನ ಅಸುವು
ಮಂತ್ರಮೋಡಿಯ ಹಾವು
ಅಂತರಂಗದೊಳದುವೆ ಅಮರ ಶಿಶುವು

ಎಲ್ಲರಂಜಿಪ ಸಾವು
ಒಲ್ಲದವರಿಗೆ ಬೇವು
ಬಲ್ಲವರಿಗೇನುಂಟು ಸಾವುಹೂವು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ‘ಆಹಾ…! ಬಣ್ಣದ ಚಿಟ್ಟೆ’
Next post ಪ್ರೆಂಜ್ ಕಾಫ್ಕಾ ನ “ದಿ ಟ್ರಯಲ್” ಸಾಮಾನ್ಯನಿಗೆ ತೆರೆಯದ ನ್ಯಾಯದ ಬಾಗಿಲು

ಸಣ್ಣ ಕತೆ

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…