Home / ಕವನ / ಕವಿತೆ / ಆಶಾಕಿರಣ

ಆಶಾಕಿರಣ

ಇತಿಹಾಸದ ಪುಟಪುಟಗಳಲ್ಲಿ
ಸಾವು, ನೋವು, ರಕ್ತ
ಮಾನವರ ಬೇಟೆ ನರಮೇಧ
ಸಾವಿನ ಬಾಯಿಗೆ ಬಲಿಯಾದವರು,
ಉಳಿದು ಊನರಾಗಿ ಭಾರವಾದವರು,
ತೋಪಿನ ಬಾಯಿಗೆ ಎದೆಕೊಟ್ಟು
ವೀರ ಪಟ್ಟವ ಪಡೆದು
ಸ್ವಾತಂತ್ರ್ಯಕ್ಕಾಗಿ ಹಗಲಿರುಳೂ
ಹಂಬಲಿಸಿ ಮಣ್ಣಾದವರು.
ಇವರ ಹೆಂಗಸರಿಗೆ ಉಳಿದದ್ದು
ವಿಧವೆಯರ ಪಟ್ಟ
ಹಸಿವು ದಾರಿದ್ರ್ಯಗಳ ನರ್ತನ,
ಜಾತಿ-ಮತಗಳ ಮತ್ಸರ
ದುಷ್ಟ ಶಕ್ತಿಗಳ ಕೈವಾಡ
ಆಂತರಿಕ ಭಯ
ಅಭದ್ರತೆಯ ಕಾಟ
ಅಸಹಾಯಕ ಜನತೆಯನು
ಬಲಿಕೊಡುವ ಕಸಾಯಿಗಳ
ಕೈಯಿಂದ ಜನರನು
ಹೇಗೆ ಉಳಿಸಿಕೊಳ್ಳಲಿ?

ನನ್ನವರೆ ಒಂದಾಗಿರಿ
ಹಿಂದಿನವರ ತ್ಯಾಗ
ಬಲಿದಾನಗಳ ನೆನೆದು
ಸಾಮ್ರಾಜ್ಯಶಾಹಿಗಳ ಸೊಕ್ಕಡಗಿಸಲು
ಪಟ್ಟಭದ್ರರ – ಕುಟಿಲ ತಂತ್ರಗಳನ್ನು
ಹುಸಿಗೊಳಿಸಲು ಒಂದಾಗಿರಿ
ದೇಶದ ಮೇಲೆ ಹರಡಿದ
ಕಪ್ಪು ಕತ್ತಲೆಯ ಸರಿಸಲು
ಬೆಳಕಿನ ಆಶಾಕಿರಣವಾಗಿರಿ.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...