ಪ್ರತೀಕ್ಷೆ-ನಿರೀಕ್ಷೆ

ಜನಜಂಗುಳಿಯಲ್ಲಿ ಕಳೆದಿರುವ
ಬದುಕಿನ ಜೊತೆಗಾರನಿಗೆ
ಮತ್ತೆ ಮತ್ತೆ ಹುಡುಕುತ್ತೇನೆ,
ಕೀವು ಸೋರುವ ಗಾಯಗಳಿಗೆ
ಮತ್ತೆ ಮತ್ತೆ ತೊಳೆಯುತ್ತೇನೆ,
ಮುಲಾಮು ಸವರುತ್ತೇನೆ,
ಎಂದಿಗೂ ಒಂದಾಗದ
ರೈಲು ಹಳಿಗಳಂತೆ
ಕ್ಷಿತಿಜದಲ್ಲಿ ಎಂದಿಗೂ ಸೇರದ
ನದಿಯ ಎರಡು ದಡಗಳಂತೆ
ನಡೆದಿರುವೆವು ನಾವು ನಿರಂತರ,
ಘನ-ಘೋರ ಕಾಡಿನಲ್ಲಿ ನೇರ
ದಾರಿಯಿಲ್ಲ ಕಲ್ಲು-ಮುಳ್ಳುಗಳ
ತುಂಬಿದ – ಹಾಳು ಹೊಡೆವ
ಕ್ಷಣಗಳನ್ನು – ತುಂಬಿಕೊಳ್ಳೋಣ,
ಬದುಕಿನ – ಜೀವಂತ ಬಣ್ಣಗಳಿಂದ
ಪ್ರತೀಕ್ಷೆ – ನಿರೀಕ್ಷೆಗಳಿಂದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಈ ಇಂಥ ಕಂದ
Next post ಚಂದಮಾಮ

ಸಣ್ಣ ಕತೆ

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys