ಕನಸು ವಾಸ್ತವ

ಕಡೆದು ನಿಲ್ಲಿಸಲಿಲ್ಲ ನಾನು
ಗಾಳಿ ಗೋಪುರದ ಗೋಡೆ, ಕಂಬಗಳ
ನೆಲ ಮುಗಿಲ ಗಾಳಿಯಲ್ಲಿ
ಕಟ್ಟಲಿಲ್ಲ ನಾನು ತಾಜಮಹಲುಗಳ..
ಕನಸಿನ ಬುತ್ತಿ ಬಿಚ್ಚಲಿಲ್ಲ.

ಸಾಮ್ರಾಜ್ಯಗಳ ನಾನು ಉರುಳಿಸಲಿಲ್ಲ.
ಮತ್ತೆ ಎತ್ತರಕೆ ನಿಲ್ಲಿಸಲಿಲ್ಲ.
ಮಹಲುಗಳ ಮಜಲುಗಳ
ರಾಜರುಗಳ ಹಳೆಮರಕ್ಕೆ
ಹೊಸ ಚಿಗುರು ಆಲಕ್ಕೆ
ಸಮಕಾಲೀನ ಭೂಮಿ ನೀರು
ಬೇರುಗಳು, ಬಿಳಲುಗಳು
ದಾರಿ ಸವೆಸಿದೆ ಕಾಲಚಕ್ರ
ಸಮಕಾಲೀನ ಬಿಳಲುಗಳ ತನಕ
ಸುರುಳಿಯಂತೆ ಸುತ್ತಿಕೊಂಡಿರುವ
ಹುತ್ತದಾಕೃತಿಯ ಬೇರುಗಳು,
ಬಿಳಲುಗಳ ಸರಿಸಿ ಹೊರಗೆ
ಬಂದು ಇಣಕುವ ನೋವು
ಹಾಹಾಕಾರಗಳು ಇರುಳಿನ
ಕತ್ತಲಿಗೆ ಶರಣು ಹೋಗಿ
ಮತ್ತೆ ಬೆಳಕುಗಾಣುವ
ಬೆಳಕು ಕತ್ತಲೆಯ ಆಟ
ಕನಸು ವಾಸ್ತವಗಳ ಕೂಟ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ನಡದ ಸಿರಿಕಂಠ ಶ್ರೀ ಕಾಳಿಂಗರಾಯ
Next post ಕೃಷ್ಣಗಿರಿ ಕೃಷ್ಣರಾಯರಿಗೆ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys