ತುಸುತುಸುವೇ ಹತ್ತಿರವಾಗುವ
ಕ್ರೂರ ಸಾವಿನ ಸಂಬಂಧ
ಪಾಶವೀ ಆಕ್ರಮಣ,
ವಿರಹದ ಬಿಸಿ ಮೀರಿ
ಹೊರ ಬರುವ ಕರುಳ ಸಂಬಂಧ,
ಬದುಕು ಮುದುಡುವಂತೆ
ಬೀರುವ ಸುಡು ನೋಟ,
ಬದುಕಿನ ಆಳ – ಅಗಲ
ಏರುಪೇರಿನಲಿ ಏಕುತ್ತ
ಎಳೆದು ತಂದ ಬಾಳಬಂಡಿ
ಮನೆ ಮಂದಿಗೆಲ್ಲ ಬಡಿಸಿ,
ಬರಿಹೊಟ್ಟೆ ಖಾಲಿ ತಟ್ಟೆ
ಬರೀ ನೀರು ಗತಿಯಾಗಿ
ತೃಪ್ತಿ ಮರೀಚಿಕೆ
ಕ್ರೌರ್ಯ ಪುನರಾವರ್ತನೆ
ತಾಳದೇ ತತ್ತರಿಸಿ
ಕುಸಿದಾಗ ಭೂಮಿಗೆ,
ಸಾವು ನೋವಿನ ಸೆಣಸಾಟ,
ನಾಯಕಿಗೆ ದುರಂತದ
ಬಾಯ್ತೆರೆದ ಭೂಮಿಯಲಿ
ಹುಡಿಯಾಗಿ ಒಡಲು ಸೇರಿ
ಮೊರೆ ಹೋಗಿ ಚಿರನಿದ್ರೆ,
ಹೇಳಿದಳು ಕೊನೆ ವಿದಾಯ
ನೋವು ಕ್ರೌರ್ಯಗಳಿಗೆ
*****
Related Post
ಸಣ್ಣ ಕತೆ
-
ಕರಿಗಾಲಿನ ಗಿರಿರಾಯರು
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ವರ್ಗಿನೋರು
ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…
-
ಕರಾಚಿ ಕಾರಣೋರು
ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…
-
ವ್ಯವಸ್ಥೆ
ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…