ನಾಳೆಗಾಗಿ

ನನ್ನ ನಗುವಿನ ಹಿಂದೆ
ಅಡಗಿದ ಸಾವಿರ ಸತ್ಯಗಳಿವೆ.
ಹರಿದ ಬಟ್ಟೆಗೆ ಹಚ್ಚಿದ
ಹಲವಾರು ತೇಪೆಗಳಿವೆ.
ಒತ್ತಾಯದ ನಗೆಯನ್ನು
ಮತ್ತೇ ಮತ್ತೇ
ಬರಿಸಬೇಕಿದೆ ಮುಖದಲಿ
ನೋವನ್ನು ಹಲ್ಲು ಕಚ್ಚಿ
ಕಣ್ಣು ಮುಚ್ಚಿ ಸಹಿಸಬೇಕಿದೆ.
ಮನದ ಆಳದ ನೋವಿನ
ವಿಷ ತುಂಬಿದ ಗುಟುಕುಗಳ
ತುಟಿ ಎರಡು ಮಾಡದೇ
ನುಂಗಿ ನಗಬೇಕಿದೆ.
ಸನ್ನೆಯಿಂದ ಕಣ್ಣು ಮಿಟುಕಿಸಿ
ಕಪ್ಪು ಕತ್ತಲೆಗೆ ಕರೆವ
ಬುಸುಗುಡುವ ಗೂಳಿಗಳಿಗೆ
ನಗೆಯ ಮುಖವಾಡ
ಧರಿಸಿ ಭೂಮಿಯಾಗಬೇಕಾಗಿದೆ.
ಹಸಿದ ಕಂದಮ್ಮಗಳ
ರೋದನ ಆಕ್ರಂದನ
ಕಿವಿಗೆ ಬೀಳುವಾಗ
ತುಟಿಕಚ್ಚಿ ಹೃದಯ
ಕಲ್ಲು ಮಾಡಿಕೊಂಡು ಸಹಿಸಬೇಕಿದೆ,
ಲೋಕದಲಿ ದಿನದಿನವೂ
ಸಾಯುತ್ತ ನೋವನ್ನು
ಸಹಿಸುತ್ತ ಬದುಕಬೇಕಿದೆ
ಸುಂದರ ನಾಳೆಯ ಕನಸುಗಳ ಕಾಣುತ್ತ
ಜೋಗುಳ ಹಾಡುತ್ತ ಕರುಳ ಕುಡಿಗಳ
ತಟ್ಟಿ ಮಲಗಿಸಬೇಕಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಲ್ಲಿ ನಿಂತು
Next post ಆಗಸದ ಕಾಣಿಕೆ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…