Home / ಕವನ / ಕವಿತೆ / ನೂರೇನ್‌ಳ ಅಂತರಂಗ

ನೂರೇನ್‌ಳ ಅಂತರಂಗ

ಕಣ್ಣು ಮುಚ್ಚಿ ದೀರ್ಘ
ಪ್ರಾರ್ಥನೆ ಸಲ್ಲಿಸಿ,
ತಲೆ ತುಂಬ ಎಳೆದ
ಮುಸುಕಿನಡಿಯಲ್ಲಿ
ಕಣ್ಣ ಮುತ್ತುಗಳ
ಬಳಬಳನೆ ಉದುರಿಸಿ,
ಕರುಳಿಗೆ ಹೊತ್ತಿಕೊಂಡ
ಬೆಂಕಿಯ ಜ್ವಾಲೆ-
ಹೊರ ಚಾಚದಂತೆ
ನಂದಿಸಿ ಮೇಲೇಳುವ
ಹೊಗೆಯ ನೋಡುತ್ತ
ನಿಟ್ಟುಸಿರು ಬಿಡುತ್ತ
ಗೆದ್ದು ಬರುವನೆಂದು
ವಿಜೃಂಭಣೆಯಿಂದ
ಬರಮಾಡಿಕೊಳ್ಳಬೇಕೆನ್ನುವ
ನಿನ್ನಾಸೆಯ ಕೆಂಪುಬಣ್ಣ
ಪತ್ರಿಕೆಯ ‘ತಲ್ಲಾಕ್’
ಶಬ್ದ ಕೇಳಿ ಬಿಳುಪಾಗಿ
ಬದುಕೆಳೆದ ಬರೆಗಳು
ಚಾವಟಿಯ ಏಟುಗಳು
ಅಲ್ಲಾಹ್‌ನಿಗೆ ಸಲ್ಲಿಸಿದ
ವ್ಯರ್ಥ ಪ್ರಾರ್ಥನೆಗಳು
ಮನದ ಬಣ್ಣದ ಕನಸುಗಳು
ಒಡೆದು ಚೂರಾದ ಆಸೆಗಳು
ರೆಕ್ಕೆ ಮುರಿದ ಹಕ್ಕಿಯಂತೆ
ಚಾರ್‌ಮಿನಾರದ ಚೌಕದಲಿ
ಗೋಳಿಟ್ಟ ನೂರೇನ್ನಳ
ಶಾಪ ಆಕಾಶದಲ್ಲಡಗಿರುವ
ಮಿಂಚು ಸೆಳಕು ಬಿಜಲಿಗಳಿಗೆ
ತಟ್ಟದಿರುವದೆಂತು?
*****
(ಟಿಪ್ಪಣಿ:- *ನೂರೇನ್-ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕನ ಮಾಜಿ ಪತ್ನಿ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...