Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...