ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲ್ಯಾಪ್ ಟಾಪ್
Next post ತಿದ್ದಲಾರದ ಭೂತ

ಸಣ್ಣ ಕತೆ

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…