Home / ಲೇಖನ / ವಿಜ್ಞಾನ / ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಆಸ್ಟರಿನ್, ಮಾತ್ರೆ ಒಂದೇ ಸರ್ವ ರೋಗಕ್ಕೂ ಮದ್ದು

ಮನುಷ್ಯ ಅಂದ ಮೇಲೆ ಕೈಕಾಲು ನೋವು, ಹೊಟ್ಟೆನೋವು, ಹೃದಯದ ಬೇನೆ, ಪಾರ್ಶ್ಯುವಾಯು ಕಣ್ಣಿನ ದೋಶ, ರಕ್ತದ ಹೆಚ್ಟು ಒತ್ತಡ ಹೀಗೆ ಏನೇನೋ ಕಾಯಿಲೆಗಳು ಬರುತ್ತವೆ. ಇವೆಲ್ಲವುಗಳಿಗೂ ಬೇರೆ ಬೇರೆ ಔಷಧಿ ಪಡೆದು ಸೇವಿಸುವುದು ಕಷ್ಟ. ಜತೆಗೆ ಇವೆಲ್ಲಕ್ಕೂ ಹಣವ್ಯಯವೂ ಹೆಚ್ಚು. ಅದರಲ್ಲೂ ಬಡವರಿಗೆ ಇಂಥಹ ರೋಗಗಳು ಕಾಣಿಸಿಕೊಂಡರೆ ಇನ್ನು ಕಷ್ಟ. ಆದರೆ ಇವೆಲ್ಲವುಗಳನ್ನು ಗುಣಪಡಿಸುವ ಏಕೈಕ ಮಾತ್ರೆ ಒಂದು ಇದೆ ಎಂದರೆ ನಂಬುವಿರಾ? ಅಂಥಹ ಔಷಧಿಯೇ ಆಸ್ಟರಿನ್. ಇದನ್ನು ಸೇವಿಸಿದರೆ ಹೃದಯಾಘಾತವಾಗುವುದನ್ನು ಕಡಿಮೆ ಮಾಡುತ್ತದೆ ಪಾರ್‍ಶ್ವವಾಯುರೋಗ ನಿವಾರಣೆಯಾಗುತ್ತದೆ. ಗರ್ಭಪಾತವನ್ನು ತಡೆಗಟ್ಟುತ್ತದೆ. ಕಣ್ಣಿಗೆ ಪರೆ ಬರುವುದನ್ನು ನಿಲ್ಲಿಸುತ್ತದೆ. ರಕ್ತದ ಒತ್ತಡವನ್ನು ಸಮಗೊಳಿಸುತ್ತದೆ. ಜ್ವರ, ನೆಗಡಿ, ನೋವುಗಳನ್ನು ಉಪಶಮನ ಮಾಡುತ್ತದೆ! ಇದು ಬಹುರೋಗಿ ನಿವಾರಣಾ ರಾಮಬಾಣವಾಗಿದೆ. ಈ ಸಿದ್ಧೌಷಧವು ೧೮೦೦ ಅಂತ್ಯದಲ್ಲಿ ಕಂಡು ಹಿಡಿಯಲ್ಪಟ್ಟಿತು. 325 M.G.ಯ ಇದರ ಮಾತ್ರೆಯನ್ನು ದಿನಂಪ್ರತಿ ಜಗತ್ತಿನಾದ್ಯಂತ ಲಕ್ಷಾಂತರ ಜನಸೇವಿಸುತ್ತಾರೆ. ಮಾನವ ಶರೀರದಲ್ಲಿ ತಯಾರಾಗುವ ಇಂಟರ್‌ಲ್ಯೂಕೆನ್-2, ಮತ್ತು ಇಂಟರ್‌ಪೆರಾನ್, ಎಂಬ ರೋಗ ನಿರೋಧಕಗಳನ್ನು ಶರೀರ ತೀವ್ರವಾಗಿ ಉತ್ಪತ್ತಿ ಮಾಡುವುದಕ್ಕೆ ಆಸ್ಟಿರಿನ್ ಸರಿಪಡಿಸುತ್ತದೆ ಎಂದು ಇತ್ತೀಚೆಗೆ ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ.

ಆದರೆ ಕೆಲವರಿಗೆ ಆಸ್ಟಿರಿನ್ ತೆಗೆದುಕೊಂಡಾಗ ವಾಂತಿ, ಅಲರ್ಜಿ, ಎದೆ‌ಉರಿ ಉಂಟಾಗುತ್ತದೆ ಇದರಿಂದ ಅಂತರಿಕ ರಕ್ತಶ್ರಾವ ಮೂತ್ರಜನಾಂಗಕ್ಕೆ ಹಾನಿ ಉಂಟಾಗಬಹುದು. ಅಸ್ತಮಾ ಇರುವವರಿಗೆ ಇದರಿಂದ ತೊಂದರೆಯಾಗಬಹುದು. ಆದ್ದರಿಂದ ಈ ನೋವು ನಿವಾರಕ ಸಿದೌಷಧಿಯನ್ನು ವೈದ್ಯರನ್ನು ಕೇಳಿಯೇ ತೆಗೆದುಕೊಳ್ಳಬೇಕು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...