ಮೌಢ್ಯತೆ

ಮೂಢತೆಯ ಮಾತು
ಆಯಿತೇ ಮುತ್ತು ಹವಳ
ನೋಡಲು ಪತಿ ಹವಳ
ಸಾಯುವನೆಂದು ಕಳವಳ

ಅದೆಷ್ಟೋ ದಿನಗಳಿಂದ
ಕೊರಳಲಿ ಇದ್ದ ಮುತ್ತಿಗೆ
ಜೀವ ಬಂದಿತೇನೋ ಈಗ
ಕುಟ್ಟಿದರೇ ಬಿಡುವುದೇ ಕುತ್ತ

ನೀತಿಯ ಮಾತ ವರ್‍ಷ ಹೇಳಿದರೂ
ಕೇಳದ ಮಹಾ ಮಣಿಗಳು
ಅನೀತಿಯ, ಮೌಢ್ಯದ ಮಾತುಗಳು
ಕ್ಷಣದಲ್ಲೇ ಆವರಿಸಿದೆಯಲ್ಲ?

ಮರಣ ಬಾರದ ಹೊರತು
ಜೀವಿಗಳು ಸಾಯುವುದಿಲ್ಲ
ಮೌಢ್ಯತೆ ಆಚರಣೆಯಿಂದ
ಮರಣ ಮುಂದೆ ಹೋಗೋದಿಲ್ಲ

ಆಡಿದ ಮಾತಿಗೆ ನೋಡಿದ ನೋಟಕ್ಕೆ
ಪ್ರಪಂಚ ಬದಲಾಗದು ಇದು ಸತ್ಯ
ಕೇಳಿದರೆ ನಮ್ಮ ಮನಸ್ಸು ಮತ್ತು ಹಣ
ಹಾಳಾಗುತ್ತೆ ಇದು ನಿಜ..
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಜೋಗಿಣಿ ಹಕ್ಕಿ ತಾವು ಹುಡುಕುತ್ತಾ…..
Next post ಡಿ.ವಿ.ಜಿ.

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…