ಶ್ರೀಗುರುವಿನಡಿಗೆ

ಅಂದು ಏನು ಹೇಳಿದ್ದೆ ತಂದೆ ನೆನ-
ಪಿಹುದೆ ನಿನಗೆ ಮತ್ತೆ?
ಕೈಯನೆಂದಿಗೂ ಬಿಡೆನು ಎಂದಿದ್ದೆ
ಮತ್ತೆ ಏಕೆ ಬಿಟ್ಟೆ ?

ದಿವ್ಯ ಜೀವನದ ಸಾಧನೆಗೆ ಎಂದು
ಬದ್ಧನಾಗಿ ಇದ್ದೆ
ಉನ್ಮಾದದೊಂದು ಅಮಲಿನಲಿ ಗುರುವೆ
ನೆಲಕುರುಳಿ ಹೊರಳಿ ಬಿದ್ದೆ

ವಿಷವ ನೆಕ್ಕಿ ಬದುಕಲಿಕೆ ಹೆಣಗಿದೆನು
ಕೈಯ ಪಿಡಿಯೊ ಗುರುವೆ
ಬೇಗ ಬದುಕಿಸೈ ದೀಪನಂದಲಿದೆ
ಭಕ್ತ ಕಲ್ಪತರುವೆ

ಹುಲ್ಲು ಕಡ್ಡಿಯನು ನಂಬಿಹೊಳೆಯನ್ನು
ಈಸಲೆಂದು ಬಗೆದು
ಬಿದ್ದೆ ತಿರುಗಣಿಗೆ ಎತ್ತು ಗುರುದೇವ
ನನ್ನ ಮೇಲೆ ತೆಗೆದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೧೧೨
Next post ರಾವಣಾಂತರಂಗ – ೮

ಸಣ್ಣ ಕತೆ

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…