ಮೈ ತೊಳೆದು ಗಂಗೆಯಲಿ ಮನವೆಲ್ಲ ಮಡಿಯಾಗಿ
ಅವಕಾಶವೆಲ್ಲವನು ತುಂಬಿದರು ದೇಗುಲದಿ
ಸಾಕಾರ ನಾಗಿರುವ ವಿಶ್ವೇಶ ನಿನ್ನಡಿಗೆ
ಶರಣಾಗಿ ಬಂದಿಹುದು ಈ ಜೀವ ಈ ಬಾಳ
ನಿನ್ನಡಿಗೆ ಮುಡುಪಾಗಿ ನಿಲಿಸುವಂತಹ ಮನವ
ನೀಡೆನೆಗೆ ಕಾರುಣ್ಯರೂಪನೇ! ತಾಮಸದ
ಕಜ್ಜಳವ ಕಳೆದೊಗೆದು ತ್ರಿಗುಣದಂಚನು ದಾಟಿ
ವಿಜ್ಞಾನದಾನಂದ ಸೀಮೆಯನು ಸೇರುವೊಲು
ರೂಪಿಸೈ ದಯೆಯಿಂದ ಭಗವಂತ ಬಲವಂತ!
ಅಬಲರಿಗೆ ಬಲವೀವೆ ನಿನಗೆಲ್ಲವೂ ಲೀಲೆ
ನೀ ಕೊಡಲು ನಿಂತಿರಲು ನಾನೇಕೆ ನಿರ್ಬಲನು?
ನನ್ನೆದೆಯ ಬಾನಿನೊಲು ಬಿತ್ತರಿಸಿ ಆತ್ಮದಲಿ
ವಾರಿಧಿಯ ಗಾಂಭೀರ್ಯವನ್ನು ತುಂಬಿ ಪರಮೇಶ
ದಿವ್ಯಕಜ್ಜಕ್ಕಾಗಿ ಕೈದುವೆನ್ನನು ಮಾಡು
*****
Related Post
ಸಣ್ಣ ಕತೆ
-
ಅಂತರಂಗ ಶುದ್ಧಿ ಬಹಿರಂಗ ಶುದ್ಧಿ
ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…
-
ಅವನ ಹೆಸರಲ್ಲಿ
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಗಂಗೆ ಅಳೆದ ಗಂಗಮ್ಮ
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
-
ಒಂದು ಹಿಡಿ ಪ್ರೀತಿ
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…