ಅಥೆಲೋ ನಾಟಕ ಓದಿ

ಬಾಳ ಬಣವೆಯ ಕೆಳಗೆ
ಮತ್ಸರದ ಕಿಡಿ ಹೊತ್ತಿ!
ಸುಟ್ಟು ಹಾಕುವುದಯ್ಯೋ!
ನಿರ್ಬುದ್ದ ಕಿಡಿಗೇಡಿ
ದೌರ್‍ಮನಸ್ಯವು ಒಂದು
ದುಡಿಯುತಿದೆ ಸಂತತವು

ಆನಂದವನು ಕೆಡಿಸಿ
ದುಮ್ಮಾನವನು ಬೆಳೆಸಿ
ಸೈತಾನ ನೃತ್ಯವನು
ಹಾಕುತಿದೆ ಧೀಂಕಿಟ್ಟು

ಋತವೆಲ್ಲ ಕಾಲ್ದೆಗೆದು
ಹಾಳಾಗಿ ಹೋಗುತಿದೆ

ದಿನದಿನಕು ಜೀವನದಿ
ವಿಷಮತೆಯು ಹೆಚ್ಚುತಿದೆ
ಸಂತಾಪತಾಪಗಳ
ಕೋಟಲೆಯ ಮಡುವಿನಲಿ
ನರನರಳಿ ಸಾಯುತಿವೆ
ನೂರಾರು ಜೀವಿಗಳು!

ಜಗವ ನಾಳುವಕೈಯ
ನರವು ಸತ್ತಿಹುದೇನೊ
ಎಂಬ ಸಂಶಯದಿಂದ
ತತ್ತರಿಸುತಿದೆ ಬುದ್ಧಿ

ಕೊನೆಯು ಬರುವದೆ ಇಂಥ
ರಕ್ಕಸರ ಹೂಟಕ್ಕೆ?
ಎಂದು ತಲೆತುರಿಸುವದೆ
ಉದ್ಯೋಗವಾಗಿಹುದು

ಮಾನವನ ಮಿದುಳೆಲ್ಲ
ಕೈಯೂರಿ ನಿಂತಿಹುದು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಭಾವಗೀತೆ
Next post ರಾವಣಾಂತರಂಗ – ೧೧

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ಸ್ವಯಂಪ್ರಕಾಶ

    ಇಸ್ತ್ರೀ ಇಲ್ಲದ ಸೀರೆ, ಬಾಚದ ತಲೆ... ಕೈಯಲ್ಲಿ ಚೀಲದ ತುಂಬ ತರ್ಕಾರಿಗಳೊಂದಿಗೆ ಮಾರುಕಟ್ಟೆಯಿಂದ ಹೊರಗೆ ಬರುವುದು ಭ್ರಮರೆ’ಯೇ... ಕಂಡು ತುಂಬಾ ಆಶ್ಚರ್ಯವಾಯಿತು. ರೋಡಿನ ಈ ಕಡೆ ಕಾರು… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

cheap jordans|wholesale air max|wholesale jordans|wholesale jewelry|wholesale jerseys