ಕೆಂಪುಗಳ ಹಬ್ಬ

(ಹರೀಂದ್ರನಾಥ ಚಟ್ಟೋಪಾಧ್ಯಾಯರ ಒಂದು ಇಂಗ್ಲೀಷ್ ಕವಿತೆಯ ಅನುವಾದ)

ಭೂಮ್ಯಾಕಾಶದ ಕೆಂಪುಗಳೆಲ್ಲವು
ಕೂಡುತೆ ಹಬ್ಬವ ಮಾಡಿದವು.
ಬಂದವು ಅಲ್ಲಿಗೆ ಬಗೆ ಬಗೆ ಕೆಂಪು,
ಗುಲಾಬಿ ಪೂಗಳ ಪರಿಮಳ ಕೆಂಪು,
ಮಸಣದ ಜ್ವಾಲೆಯ ಗುಟ್ಟಿನ ಕೆಂಪು,
ಅರುಣ ಕಿರಣಗಳ ಸಂಜೆಯ ಕೆಂಪು,
ಮುದ್ದು ಕೂಸುಗಳ ಕೆನ್ನೆಯಕೆಂಪು,
ಗಿಳಿಗಳ ಚುಂಚಿನ ಅಳಿಯದ ಕೆಂಪು,
ಒಣಗಿದ ಹಣ್ಣಿನ ಒಣ ಒಣ ಕೆಂಪು,
ಹಕ್ಕಿಯ ಕಂಗಳ ಗುಡ್ಡಿಯಕೆಂಪು,
ಪ್ರೇಮದ ಹೃದಯದ ಒಂಟಿಗ ಕೆಂಪು!
ಸಾಗಿತು ಹಬ್ಬವು ಕೂಡಲು ಕೆಂಪು!
ನಿಂತಿತು ಹೊರಬದಿ ಒಂದೇ ಕೆಂಪು!
ಅದುವೇ ಮನುಜನ ಕ್ರೋಧದ ಕೆಂಪು !
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೆರಳು-ಬೆಳಕು
Next post ವಚನ ವಿಚಾರ – ಅಸಾಧ್ಯ

ಸಣ್ಣ ಕತೆ

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

cheap jordans|wholesale air max|wholesale jordans|wholesale jewelry|wholesale jerseys