ಚಿತ್ರದ ಅಂಗಡಿ

ಗದುಗಿನ ನಾಡಹಬ್ಬದಲ್ಲಿ ಶ್ರೀ ಮಧುರ ಚೆನ್ನ ರಿ೦ದ ಪರೀಕ್ಷಿಸಲ್ಪಟ್ಟು ರಜತ ಪದಕವನ್ನು ಪಡೆದುದು

ಅಮಾ, ಚಿತ್ರದ ಅಂಗಡಿ ನೋಡೆ !
ಸುಂದರ ಸೊಬಗಿನ ಅಂಗಡಿ ನೋಡೆ !
ಬಗೆ ಬಗೆ ಬಣ್ಣದ ಪಟಗಳ ನೋಡೆ !
ಭಾರತದೇಶದ ಚಿತ್ರವನೋಡೆ ! || ೧ ||

ಅಮ್ಮಾ, ಇಲ್ಲಿದೆ ಹೆಚ್ಚಿನ ಚಿತ್ರ !
ಸಕಲರ ಮನವನು ಸೆಳೆಯುವ ಚಿತ್ರ !
ಇದುವೇ ನಾ ಹಟ ಮಾಡಿದ ಚಿತ್ರ !
ಕನ್ನಡ ಕುವರರ ಹೆಮ್ಮೆಯ ಚಿತ್ರ ! || ೨ ||

ಸುಂದರ ಬನಗಳ ಚಿತ್ರಿಪ ಚಿತ್ರ !
ಗುಡ್ಡ ಬೆಟ್ಟಗಳು ತುಂಬಿಹ ಚಿತ್ರ !
ಗೋದಾವರಿ ಹೊಳೆ ಹರಿದಿಹ ಚಿತ್ರ !
ಕಾವೇರಿಯು ತಾ ಕಾಖವ ಚಿತ್ರ ! || ೩ ||

ಅಮಾ, ಇಲ್ಲಿಹ ಗುಡಿಗಳ ನೋಡು !
ಜಕ್ಕಣ ಶಿಲ್ಪಿಯ ಜಾಣ್ಮಯ ನೋಡು !
ವಿಜಯನಗರದಾ ವೈಭವ ನೋಡು !
ಹುಕ್ಕ ಬುಕ್ಕ ಮಾಧವರನು ನೋಡು ! || ೪ ||

ಅಮ್ಮಾ, ಕುಮಾರವ್ಯಾಸನ ಚಿತ್ರ !
ಕಲ್ಯಾಣದ ಆ ಬಸವನ ಚಿತ್ರ !
ಚೆನ್ನಮ್ಮನ ಕಿತ್ತೂರಿನ ಚಿತ್ರ !
ಬೆಳವಡಿ ರಾಣಿಯ ಶೌರ್ಯದ ಚಿತ್ರ ! || ೫ ||

ಅಮ್ಮಾ, ಇದದೋ ಹಳ್ಳಿಯ ಚಿತ್ರ !
ನೇಗಿಲ ಹೊಡೆಯುವ ಯೋಗಿಯ ಚಿತ್ರ !
ರಾಟಿಯ ತಿರುಗಿಹ ಭಗಿನಿಯ ಚಿತ್ರ !
ಖಾದಿಯ ಕೊಳ್ಳುವ ಜನಗಳ ಚಿತ್ರ ! || ೬ ||

ಅಮ್ಮಾ ! ಭೀಕರ ದೃಶ್ಯವಿದಲ್ಲೆ ?
ಬಡವನ ಗೋಳಿನ ಚಿತ್ರವಿದಲ್ಲೆ ?
ಹೊಲೆಯರೆಂದು ಸಲೆ ಹಳಿಯುವರಲ್ಲೆ ?
ದಾಸ್ಯದ ದಾಹದಿ ಬಳಲುವರಲ್ಲೆ ? || ೭ ||

ಅಮ್ಮಾ, ಇಲ್ಲಿಹ ನೋಟವಿದೇನು ?
ಕನ್ನಡದಮ್ಮನು ಅಳುತಿಹಳೇನು ?
ಕರುನಾಡಿನ ಜನ ಮಲಗಿಹುದೇನು ?
ಪರನಾಡಿನ ಜನ ಬರುತಿಹುದೇನು ? || ೮ ||

ಅಮ್ಮಾ, ಬೇಕಿದು ಚಿತ್ರವು ನೋಡು !
ಅಯ್ಯೋ ! ಮರಾಠ ಬಂದನು ನೋಡು !
ತೆಲುಗನು ಬಂದನು ಕೊಳ್ವನು ನೋಡು !
ಅಪ್ಪನ ಹುಡುಕುವ ಬೇಗನೆ ಓಡು || ೯ ||

ಅಪ್ಪಾ ! ಅಪ್ಪಾ !! ಎಲ್ಲಿಹೆ ಬಾರೊ !
ಪ್ರೀತಿಯ ಚಿತ್ರವ ಕೊಳ್ವರು ಬಾರೋ !!
ಕರ್ನಾಟಕವಿದು ಪೊಪುದು ಬಾರೋ !!!
ಕನ್ನಡಿಗನೆ ನೀ ಬೇಗನೆ ಬಾರೋ !!!! || ೧೦ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಳೇ ಮಂದಿ
Next post ವಚನ ವಿಚಾರ – ನಿಜವೇ?

ಸಣ್ಣ ಕತೆ

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಆವಲಹಳ್ಳಿಯಲ್ಲಿ ಸಭೆ

    ಪ್ರಕರಣ ೯ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ… Read more…