Home / ಬಾಲ ಚಿಲುಮೆ / ಕವಿತೆ / ಕಂಪ್ಯುಟರ್

ಕಂಪ್ಯುಟರ್

ತಾತ ನೀನು ಕಥೆ ಹೇಳಿರುವೆ
ನಿನಗೆ ಕಂಪ್ಯೂಟರ್ ಬಗ್ಗೆ ಹೇಳುವ

ಮೊದಲಿಗೆ ಒತ್ತಿ ಆನ್ ಗುಂಡಿ
ಬೆಳ್ಳಿ ಪರದೆ ಮೂಡಿತು ನೋಡಿ

ಇದಕ್ಕೆ ಹೇಳುವರು ಮೌಸೆಂದು
ಗಣಪತಿ ವಾಹನ ಇಲಿಯೆಂದು

ಕನ್ನಡ ನುಡಿ ಫಾಂಟಾವನ್ನು
ಗಣಕ ಪರಿಷತ್ತು ನೀಡಿದೆ.

ಕನ್ನಡ ನುಡಿಯ ಅಕ್ಷರಧಾಮ
ಇಲ್ಲಿವೆ ನೋಡಿ ಗಿಣಿ ರಾಮ

ಪತ್ರ ಲೇಖನ ಪದ್ಯಗಳನ್ನು
ಬರೆಯಬಹುದು ಬೇಕಾದಷ್ಟನ್ನು

ತಪ್ಪಾದರೆ ಡಿಲೀಟು ಬಟನ್ ಒತ್ತಲು
ಅಳಿಸಿ ಹೋಗುವುದು ಬರೆದುದೆಲ್ಲ

ಇಂಕು ಚೀತ್ಕಾಟ ಏನೂ ಇಲ್ಲ
ನೋಡಲು ಖುಷಿಯು ತೀರದಲ್ಲ

ಒಂದು ಹಾಳೆಯ ತಯಾರಿಕೆಗೆ
ಮರವೊಂದು ಸರಿವುದು ತೆರೆಗೆ

ಕಂಪ್ಯುಟರ್ ಬಳಕೆ ಮಾಡಿದರೆ
ಉಳಿವದು ಅರಣ್ಯ ನಮ್ಮ ಪಾಲಿಗೆ

ಪ್ರಾಣಿ ಪಕ್ಷಿ ನದಿ ಸಸ್ಯ ಉಳಿವಿಗೆ
ಬೇಕು ವನ ವನ ನಮ್ಮ ಬಾಳಿಗೆ

ಕಂಪ್ಯುಟರ್‌ದಿಂದ ಸುದ್ದಿಯನು
ಕಳಿಸಬಹುದೆಲ್ಲೆಡೆ ಕ್ಷಣದಲಿ

ಅಂಚೆ-ಗಿಂಚೆ ಬೇಕಿಲ್ಲ
ವಿಳಂಬ ಮಾತೇ ಇಲ್ಲ.

ಬಹೂಪಯೋಗಿ ಕಂಪ್ಯುಟರ್ ಜಾಲ
ನಮ್ಮಯ ಬದುಕಿನ ಊರುಗೋಲು
*****
೨೭.೦೯.೨೦೧೫

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...