Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...