Home / ಲೇಖನ / ಇತರೆ / ವಚನ ವಿಚಾರ – ಹುಡುಕಾಟ

ವಚನ ವಿಚಾರ – ಹುಡುಕಾಟ

ಅರಸಿ ಅರಸಿ ಹಾ ಹಾ ಎನುತಿದ್ದೆನು
ಬೆದಕಿ ಬೆದಕಿ ಬೆದಬೆದ ಬೇವುತಿದ್ದೆನು
ಗುಹೇಶ್ವರಾ ಕಣ್ಣ ಮೊದಲಲ್ಲಿದ್ದವನ ಕಾಣೆನು

ಅಲ್ಲಮನ ವಚನ. ಅಪರೂಪಕ್ಕೆಂಬಂತೆ ಅಕ್ಕನ ವಚನದ ರೀತಿಯಲ್ಲಿ ಭಾವ ತುಂಬಿಕೊಂಡ ವಚನವಾಗಿದೆ ಇದು. ಮೊದಲ ಎರಡು ಸಾಲುಗಳು ಅಕ್ಕನ ವಚನದಲ್ಲೂ ಬರಬಹುದಾದಂಥವು ಅನ್ನಿಸುತ್ತದೆ. ಗುಹೇಶ್ವರ ಅನ್ನುವುದರ ಬದಲಾಗಿ ಚನ್ನಮಲ್ಲಿಕಾರ್ಜುನ ಎಂದಿದ್ದರೆ ಅವಳ ವಚನವಲ್ಲ ಅನ್ನುವ ಧೈರ್ಯ ಯಾರಿಗೆ ಬಂದೀತು! ಹಾಗೆಂದರೆ ವಚನಗಳನ್ನು ಓದಿ ನಾವು ಕಲ್ಪಿಸಿಕೊಂಡ ಅಲ್ಲಮನ ಮಾತಿನ ರೀತಿಯದಲ್ಲ ಅನ್ನಿಸುತ್ತದೆ ಎಂದಷ್ಟೆ ಅರ್ಥ. ವಚನ ರಚನೆಯಾಗಿ ಮುನ್ನೂರು ವರ್ಷಗಳ ನಂತರದ ಹಸ್ತಪ್ರತಿಗಳಲ್ಲಿ ಸಿಗುವ ವಚನಗಳಲ್ಲಿ ಅಂಕಿತ ಬದಲಾಗಿಲ್ಲವೆಂದು ಹೇಳುವುದು ಹೇಗೆ! ಇದು ಇಂಥವರ ವಚನ ಅನ್ನುವುದು ಒಂದು ರೂಢಿಯಷ್ಟೆ, ಇನ್ನೇನೂ ಅಲ್ಲ. ವಚನಗಳು ಮನುಷ್ಯ ಮನಸ್ಸಿನ ಸಾಧ್ಯತೆಗಳ ಭಾಷಿಕ ರೂಪಗಳು. ಯಾರಾದರೂ ಹೇಳಿರಬೇಕಲ್ಲ ಅನ್ನುವುದಕ್ಕೆ ವಚನಕ್ಕೆ ಒಬ್ಬೊಬ್ಬ ವಚನಕಾರರನ್ನು ಕಲ್ಪಿಸಿಕೊಂಡು ಇವರ, ಅವರ ವಚನ ಎಂದು ವಾಗ್ವಾದ ಮಾಡುತ್ತಾ ವಚನಗಳನ್ನು ಮರೆತಿದ್ದೇವೆ.

ಇರಲಿ. ಮೇಲು ಮೇಲಿನ ತೋರಿಕೆಯನ್ನು ಮರೆತರೂ ಕೊನೆಯ ಸಾಲು ಕೂಡ ಅಕ್ಕ-ಅಲ್ಲಮ ಇವರಿಗೆ ಸಮಾನವಾದ ಧೋರಣೆಯನ್ನು ವ್ಯಕ್ತಪಡಿಸುತ್ತಿದೆ. ಕಣ್ಣಮೊದಲಿನಲ್ಲಿ ಇರುವವನ್ನು, (ಮತ್ತೆ ಯಾರು, ನೋಡುತ್ತಿರುವವನೇ ಅಲ್ಲವೆ!) ಹೊರಗೆ ಹುಡುಕಿ, ಹಾಗೆ ಹುಡುಕಿ ದಣಿದೆ ಅನ್ನುತ್ತಿದೆ ಈ ಸಾಲು. ದಣಿದ ಪರಿಯನ್ನು ಮೊದಲೆರಡು ಸಾಲುಗಳು ಹೇಳುತ್ತಿವೆ.

ತಾನು ಹುಡುಕುತ್ತಿರುವುದು ತನ್ನೊಳಗೇ ಇರುವುದನ್ನು ಅನ್ನುವ ನಿಲುವು ಅಕ್ಕನದೂ ಹೌದು. ಆದ್ದರಿಂದಲೇ `ನೀನೇಕೆ ಮುಖದೋರೆ’ ಎಂದು ಅಕ್ಕ ಕೂಡ ಅಲವತ್ತುಕೊಳ್ಳುವುದುಂಟು. ಬರಿಯ ಅಕ್ಕ ಅಲ್ಲಮ ಮಾತ್ರವಲ್ಲ ನಾವು ಕೂಡ ನಮ್ಮೊಳಗೆ ಬಿಂಬಿತವಾದದ್ದನ್ನೆ ಹೊರಗೆ ಕಾಣಲು ಯತ್ನಿಸುತ್ತ ದಣಿಯುವವರಲ್ಲವೇ? ಹಾಗಾಗಿ ಇಂಥ ವಚನಗಳು ನಮ್ಮ ಮಾತುಗಳೂ ಆಗುತ್ತವೆ.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...