Home / ಲೇಖನ / ಇತರೆ / ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ವಚನ ವಿಚಾರ – ಶರಣಾದವರಿಗೆ ಮಾತ್ರ ಗೊತ್ತು

ಅರಿಯಬಹುದು ಕುರುಹಿಡಬಾರದು
ಭಾವಿಸಬಹುದು ಬೆರೆಸಬಾರದು
ಕಾಣಬಹುದು ಕೈಗೆ ಸಿಲುಕದು
ಅಖಂಡ ನಿರಾಳವ ಕಪಿಲಸಿದ್ಧಮಲ್ಲಿಕಾರ್ಜುನಾ
ನಿಮ್ಮ ಶರಣರು ಬಲ್ಲರು

[ನಿರಾಳ-ನೆಮ್ಮದಿ, ಖಚಿತ, ಅವ್ಯಕ್ತ, ಆಕಾಶ]

ಸಿದ್ಧರಾಮನ ವಚನ. ಕಪಿಲಸಿದ್ಧಮಲ್ಲಿಕಾರ್ಜುನ ಅಖಂಡ-ಇಡಿಯಾದವನು. ಅವನು ನಿರಾಳ, ಅವನನ್ನು ಅರಿಯಬಹುದು, ಆದರೆ ಅರಿತದದ್ದನ್ನು ಒಂದು ಕುರುಹು, ಗುರುತು ಎಂದು ಇತರರಿಗೆ ಅರ್ಥವಾಗುವ ಕುರುಹಿನ ವ್ಯವಸ್ಥೆಗೆ ಒಳಪಡಿಸಲು ಆಗದು. ಅವನನ್ನು ಭಾವಿಸಿಕೊಳ್ಳಬಹುದು. ಆದರೆ ಅವನೊಡನೆ ಬೆರೆಯುವುದು ಆಗದು. ಅವನು ಕಾಣಬಹುದು, ಆದರೆ ಕೈಗೆ ಸಿಗುವುದು ಅಸಾಧ್ಯ.

ಮಾತು ಎಂಬ ಕುರುಹಿಗೆ ದಕ್ಕದ, ಭಾವನೆ ಮಾತ್ರವಾಗಿ ಉಳಿದು ಒಂದಾಗಲು ಅಸಾಧ್ಯವಾದ, ಕಾಣುವ ಆದರೆ ಕೈಗೆ ಸಿಗದ ದೇವರನ್ನು ಕುರುಹಿಗೆ, ಒಗ್ಗೂಡಿಕೆಗೆ, ಕೈಗೆಟುಕಿಸಿಕೊಳ್ಳುವುದಕ್ಕೆ ವ್ಯರ್ಥವಾಗಿ ಹಂಬಲಿಸದೆ ದೇವರು ಇದ್ದಂತೆಯೇ ಅವನಿಗೆ ಶರಣಾಗುವವರು ಮಾತ್ರ ಅವನನ್ನು ಬಲ್ಲರು.

ನಮಗೆ ಆಗುವ ಯಾವುದೇ ಅನುಭವವಾದರೂ ಅಷ್ಟೆ. ಅದಕ್ಕೆ ಸಂಪೂರ್ಣ ಶರಣಾಗದೆ ಅದು ನಮ್ಮದಾಗದು. ದುರಂತವೆಂದರೆ ನಮಗೆ ಅನುಭವವಾಗುತ್ತಿರುವ ಕ್ಷಣದಲ್ಲೇ ಅದಕ್ಕೆ ಇತರರಿಗೆ ಅರ್ಥವಾಗಬಲ್ಲ, ನಮ್ಮ ಕೈಗೆ ವಶವಾಗಬಲ್ಲ ರೂಪ ಕೊಡುವುದರಲ್ಲಿ ತೊಡಗಿರುತ್ತೇವೆ. ಇದು ಶರಣಗುಣವಲ್ಲ, ಕಪಿಲಸಿದ್ಧಮಲ್ಲಿಕಾರ್ಜುನ ನಮ್ಮವನಾಗಲಾರ.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...