Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...