Home / ಲೇಖನ / ಇತರೆ / ವಚನ ವಿಚಾರ – ಅಸಾಧ್ಯ

ವಚನ ವಿಚಾರ – ಅಸಾಧ್ಯ

ಅರಿವಿಂಗೆ ಸಿಕ್ಕದುದ ನೆನೆಯಲಮ್ಮಬಹುದೆ ಅಯ್ಯಾ
ನೆನಹಿಂಗೆ ಬಾರದುದ ಕಾಂಬುದು ಹುಸಿ
ಮುಟ್ಟಿ ಪೂಜಿಸುವ ಮಾತು ಮುನ್ನವೇ ದೂರ
ಚಿಕ್ಕಯ್ಯಪ್ರಿಯ ಸಿದ್ಧಲಿಂಗ ಇಲ್ಲ ಇಲ್ಲ ನಿಲ್ಲು ಮಾಣು

[ನೆನೆಯಲಮ್ಮಬಹುದೆ-ಧ್ಯಾನಿಸಲು ಯತ್ನಿಸಬಹುದೆ-ಕಾಂಬುದು-ಕಾಣುವುದು, ಮಾಣು-ಬಿಡು]

ಘಟ್ಟಿವಾಳಯ್ಯನ ವಚನ. ಈ ವಚನ ಅರಿವನ್ನು ಕುರಿತ ನಮ್ಮ ಕಲ್ಪನೆಗಳನ್ನೆಲ್ಲ ಪ್ರಶ್ನಿಸುತ್ತಿದೆ.

ಅರಿವು ಅನ್ನುವುದು ನೆನಪಿಗೆ ಕೂಡ ಸಂಬಂಧಿಸಿದ್ದು ಎಂದುಕೊಂಡಿದ್ದೇವೆ. ನಮ್ಮ ಇಡೀ ಶಿಕ್ಷಣ, ಸಂಸ್ಕೃತಿ ಎಲ್ಲವೂ ನೆನಪಿಗೆ ಸಂಬಂಧಿಸಿದ್ದು, ನೆನಪನ್ನೇ ಆಧರಿಸಿದ್ದು ಅಲ್ಲವೇ? ಆದರೆ ಸತ್ಯ ಅನ್ನುವುದು ಇದ್ದರೆ ಅದು ನೆನಪಿಗೆ ಸಿಲುಕದು. ಅರಿವಿಗೆ ಸಿಲುಕದು. ಅರಿವಿಗೆ ಬಾರದಿರುವ ಸತ್ಯ ನೆನಪಿಗೆ ಬರುತ್ತದೆಯೇ? ನೆನಪಿಗೆ ಬರುವುದೇನಿದ್ದರೂ ನಮ್ಮ ಹಳೆಯ ಅನುಭವ, ಕೇಳಿದ ಮಾತು ಇಂಥವೇ ಅಲ್ಲವೇ? ಯಾವುದು ನಮ್ಮ ನೆನಪಿನಲ್ಲಿ ದಾಖಲಾಗಿದೆಯೋ ಅದನ್ನು ಮಾತ್ರ ನಾವು ಈಗ ಗುರುತಿಸುತ್ತೇವೆ. ಯಾವುದು ನೆನಪಿಗೆ ಬಾರದೋ ಅದು ನಮಗೆ ಕಾಣುವುದೂ ಇಲ್ಲ. ನೆನಪನ್ನೇ ಆಧರಿಸಿಕೊಂಡಿರುವ ನಮ್ಮ ಕಾಣ್ಕೆ, ನಮ್ಮ ಅರಿವು ಸತ್ಯವನ್ನು ಕಾಣಿಸಿಕೊಡಲಾಗದು. ಹೀಗಿರುವಾಗ ಮಾತಿಗೆ ಸಿಲುಕದ, ನೆನಪಿಗೆ ಆಹಾರವಾಗದ ಸತ್ಯವನ್ನೋ ದೇವರನ್ನೋ ಮುಟ್ಟುವುದು ಪೂಜಿಸುವುದು ಅಸಾಧ್ಯ ಅನ್ನುತ್ತಾನೆ ಘಟ್ಟಿವಾಳಯ್ಯ.

ನಡುಗನ್ನಡದಲ್ಲಿ ನೆನೆ ಎಂಬ ಮಾತನ್ನು ಧ್ಯಾನಿಸು ಅನ್ನುವ ಅರ್ಥದಲ್ಲಿ ಬಳಸುವುದುಂಟು. ಧ್ಯಾನಿಸುವುದು ಏನಿದ್ದರೂ ನಮಗೆ ಗೊತ್ತಿರುವ, ನಮ್ಮ ಗ್ರಹಿಕೆಗೆ ಬಂದಿರುವ, ಧ್ಯಾನಿಸಬಲ್ಲ ಸಂಗತಿಗಳನ್ನು ಮಾತ್ರವೇ.

ಇಂಗ್ಲೀಶ್‌ನ ರಿಕಾಗ್ನಿಶನ್ ಎಂಬ ಮಾತು ನೆನೆದುಕೊಳ್ಳೋಣ. ಅದು ರಿ (ಮತ್ತೆ) ಕಾಗ್ನಿಶನ್ (ಗ್ರಹಿಸುವುದು, ಗುರುತಿಸುವುದು). ನಮ್ಮ ಜ್ಞಾನದ ಕಲ್ಪನೆ, ಅರಿವಿನ ಕಲ್ಪನೆ ಎಲ್ಲವೂ ನೆನಪನ್ನು ಮಾತ್ರ ಆಧರಿಸಿದ್ದು, ಅದರಂತೆ ನಾವು ಈ ಮೊದಲು ದೇವರನ್ನು, ಸತ್ಯವನ್ನು ಕಂಡಿಲ್ಲವಾದರೆ, ಕಂಡ ನೆನಪು ನಮ್ಮಲ್ಲಿಲ್ಲವಾದರೆ ಈಗ ಒಂದು ವೇಳೆ ದೇವರು, ಸತ್ಯ ನಮ್ಮ ಕಣ್ಣೆದುರಿಗೇ ಇದ್ದರೂ ಗುರುತಿಸಲಾರೆವು. ಹೀಗಿರುವಾಗ ನಾನು ಸತ್ಯವನ್ನು ಕಂಡೆ, ದೇವರನ್ನು ಕಂಡೆ ಅನ್ನುವ ಮಾತುಗಳೇ ಸರಿಯಲ್ಲ, ಅದು ಅಸಾಧ್ಯ ಅನ್ನುತ್ತಿರುವಂತಿದೆ ಘಟ್ಟಿವಾಳಯ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...